Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಎರಡು ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ


ಬಳ್ಳಾರಿ,ಜೂ.18: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನಡೆದ ಎರಡು ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ತಿಳಿಸಿದ್ದಾರೆ.
ವಿವಿಯ ಪರೀಕ್ಷಾ ವಿಭಾಗದಲ್ಲಿ ಜರುಗಿದ ಕಾನೂನುಬಾಹಿರ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ ಪ್ರಕರಣ ಮತ್ತು ವಿವಿಯ ಇತಿಹಾಸ, ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಅನಂತ್ ಎಲ್ ಝಂಡೇಕರ್ ಇವರು ವಿಶ್ವವಿದ್ಯಾಲಯದಲ್ಲಿನ ಸಹ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಮತ್ತು ಪ್ರಭಾರ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿನ ಕೆಲ ಕಾನೂನುಬಾಹಿರ ಆದೇಶಗಳ ಕುರಿತಂತೆ ಕುಲಾಧಿಪತಿಗಳ ಕಚೇರಿಯಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ದೂರಿನ ಪ್ರಕರಣಗಳ ಕುರಿತಂತೆ ಇತ್ತೀಚೆಗೆ ಜರುಗಿದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ವಿಷಯ ಮಂಡಿಸಲಾಗಿದ್ದು, ಸಭೆಯು ವಿಸ್ತೃತವಾಗಿ ಚರ್ಚಿಸಿ ಈ ಪ್ರಕರಣಗಳ ಕುರಿತಂತೆ ಓರ್ವ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.
ಹಾಗಾಗಿ ಎರಡೂ ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದ್ದು, ಇವರು ಪ್ರಕರಣ ಕುರಿತು 45 ದಿನಗಳ ಒಳಗಾಗಿ ತನಿಖೆ ಕೈಗೊಂಡು ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ತನಿಖಾ ವರದಿಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಕೆಯಾದ ನಂತರ ತಪ್ಪಿತಸ್ಥರ ವಿರುದ್ಧ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಹಾಗೂ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.different
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ