LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ವಿಜಯೇಂದ್ರ

 

 

ಬಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ ವೇಳೆ ಪಕ್ಷದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವ ಸಿ.ಸಿ.ಪಾಟೀಲ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಭಾ.ಜ.ಪಾ ಜಿಲ್ಲಾ ಅಧ್ಯಕ್ಷರಾದ ಸುಭಾಷ್ ಪಾಟೀಲ ಪಕ್ಷದ ಎಲ್ಲ ಮುಖಂಡರು ಇದ್ದರು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಾಮೀಜಿಗಳಲ್ಲಿ ಮತ್ತೊಂದು ಮನವಿ ಮಾಡಿದ್ದೇನೆ. ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ವಿವರಿಸಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗ ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ, ಪಂಚಮಸಾಲಿ ಸಮಾಜಕ್ಕೆ 3 ಬಿ ಕೊಡಲಾಗಿತ್ತು. 3 ಬಿ ಕೊಟ್ಟ ಕಾರಣದಿಂದಲೇ ಸಮಾಜಕ್ಕೆ 2 ಎ ಸ್ಥಾನಮಾನ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಈ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ; ಯಡಿಯೂರಪ್ಪ ಅವರ ವಿರೋಧ ಇದೆ, ಅನ್ಯಾಯ ಮಾಡಿದರು- ಇವ್ಯಾವುದು ಕೂಡ ಸರಿಯಲ್ಲ; ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದರು. ಈ ತಪ್ಪು ಅಭಿಪ್ರಾಯಕ್ಕೆ ಅವಕಾಶ ಕೊಡಬಾರದೆನ್ನುವ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಸ್ವಾಮೀಜಿಗಳು ಮನಸ್ಸು ಬಿಚ್ಚಿ ಸಂತೋಷವಾಗಿ ಮಾತನಾಡಿದ್ದಾರೆ. ಸಾಕಷ್ಟು ತಪ್ಪು ಅಭಿಪ್ರಾಯಗಳಿತ್ತು; ಕಾಂಗ್ರೆಸ್ ಸರಕಾರ ಬಂದ ಬಳಿಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಹಿಂದೆ ಯಾವುದೇ ಸರಕಾರ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ ಸಹ ನಮ್ಮ ಸಮಾಜದ ಮೇಲೆ ಈ ರೀತಿ ದೌರ್ಜನ್ಯಗಳು ಆಗಿಲ್ಲ ಎಂದು ತಿಳಿಸಿದ್ದಾಗಿ ಹೇಳಿದರು.

ಕಾಂಗ್ರೆಸ್ ಸರಕಾರ ಬಂದ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ; ಹೋರಾಟವನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ; ಖಂಡಿತ ನೀವೆಲ್ಲರೂ ಸಹಕಾರ ನೀಡಬೇಕೆಂದು ಹೇಳಿದ್ದಾರೆ. ನಾವು ಕೂಡ ಸಂಪೂರ್ಣ ಸಹಕಾರ, ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದೇನೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್