Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ವಿಜಯೇಂದ್ರ

 

 

ಬಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ ವೇಳೆ ಪಕ್ಷದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವ ಸಿ.ಸಿ.ಪಾಟೀಲ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಭಾ.ಜ.ಪಾ ಜಿಲ್ಲಾ ಅಧ್ಯಕ್ಷರಾದ ಸುಭಾಷ್ ಪಾಟೀಲ ಪಕ್ಷದ ಎಲ್ಲ ಮುಖಂಡರು ಇದ್ದರು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಾಮೀಜಿಗಳಲ್ಲಿ ಮತ್ತೊಂದು ಮನವಿ ಮಾಡಿದ್ದೇನೆ. ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ವಿವರಿಸಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗ ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ, ಪಂಚಮಸಾಲಿ ಸಮಾಜಕ್ಕೆ 3 ಬಿ ಕೊಡಲಾಗಿತ್ತು. 3 ಬಿ ಕೊಟ್ಟ ಕಾರಣದಿಂದಲೇ ಸಮಾಜಕ್ಕೆ 2 ಎ ಸ್ಥಾನಮಾನ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಈ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ; ಯಡಿಯೂರಪ್ಪ ಅವರ ವಿರೋಧ ಇದೆ, ಅನ್ಯಾಯ ಮಾಡಿದರು- ಇವ್ಯಾವುದು ಕೂಡ ಸರಿಯಲ್ಲ; ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದರು. ಈ ತಪ್ಪು ಅಭಿಪ್ರಾಯಕ್ಕೆ ಅವಕಾಶ ಕೊಡಬಾರದೆನ್ನುವ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಸ್ವಾಮೀಜಿಗಳು ಮನಸ್ಸು ಬಿಚ್ಚಿ ಸಂತೋಷವಾಗಿ ಮಾತನಾಡಿದ್ದಾರೆ. ಸಾಕಷ್ಟು ತಪ್ಪು ಅಭಿಪ್ರಾಯಗಳಿತ್ತು; ಕಾಂಗ್ರೆಸ್ ಸರಕಾರ ಬಂದ ಬಳಿಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಹಿಂದೆ ಯಾವುದೇ ಸರಕಾರ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ ಸಹ ನಮ್ಮ ಸಮಾಜದ ಮೇಲೆ ಈ ರೀತಿ ದೌರ್ಜನ್ಯಗಳು ಆಗಿಲ್ಲ ಎಂದು ತಿಳಿಸಿದ್ದಾಗಿ ಹೇಳಿದರು.

ಕಾಂಗ್ರೆಸ್ ಸರಕಾರ ಬಂದ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ; ಹೋರಾಟವನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ; ಖಂಡಿತ ನೀವೆಲ್ಲರೂ ಸಹಕಾರ ನೀಡಬೇಕೆಂದು ಹೇಳಿದ್ದಾರೆ. ನಾವು ಕೂಡ ಸಂಪೂರ್ಣ ಸಹಕಾರ, ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದೇನೆ ಎಂದು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ