ಬಳ್ಳಾರಿ:15:. ತುಮಕೂರು ಜಿಲ್ಲೆಯ ಗುಬ್ಬಿ ಶ್ರೀ ಚಿದಂಬರ ಆಶ್ರಮದಲ್ಲಿ ಮೇ.24 ರಂದು ವಿಕಾಸ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ಆಶ್ರಯದಲ್ಲಿ ವಿಕಾಸ ಸಂಭ್ರಮ - 2026, ಸಾಧಕರಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ವಿಕಾಸ ಸಮಾನ ಮನಸ್ಕರ ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ ಅವರು ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹಿರಿಯ ಕ್ರೀಡಾ ಪತ್ರಕರ್ತ ದಿ.ವಿನಾಯಕ ದೇಶಪಾಂಡೆ ಅವರ ಸ್ಮರಣಾರ್ಥ ಅರ್ಹ ಕ್ರೀಡಾ ಪತ್ರಕರ್ತರೊಬ್ಬರಿಗೆ ದಿ.ವಿನಾಯಕ ದೇಶಪಾಂಡೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಮ್ಮ ಹಿರಿಯರು ನಮ್ಮ ಹೆಮ್ಮೆ, ಮಾಲಿಕೆಯಲ್ಲಿ ಮಾಧ್ಯಮ ಕ್ಷೇತ್ರದ ಹಿರಿಯರನ್ನು ಹಾಗೂ ಸಾಧಕ ಯುವ ಮಿತ್ರರನ್ನು ಸನ್ಮಾನಿಸಿ ಗೌರವಿಸಲಾಗುವುದು. ಕಾರ್ಯಕ್ರಮಕ್ಕೆ ಹಿಂದಿನ ದಿನ ಆಗಮಿಸುವವರಿಗೆ ಆಶ್ರಮದ ವಿದ್ಯಾರ್ಥಿ ನಿಲಯದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಬ್ಬರು ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ 98440 30946, ರಾಜ್ಯ ಉಪಾಧ್ಯಕ್ಷ ಮಂದಾರ ರಾಜೇಶ್ ಭಟ್ 8088188339, ಜಿಲ್ಲಾ ಮುಖ್ಯ ಸಂಚಾಲಕರು, ವಿಕಾಸ ದಕ್ಷಿಣ ಕನ್ನಡ ಹರೀಶ್ ಕೆ.ಆದೂರು 9483455922 ಅವರನ್ನು ಸಂಪರ್ಕಿಸಬಹುದು.
ಗುಬ್ಬಿಯಲ್ಲಿ ನಡೆಯುವ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಸಂಚಾಲಕರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ನಂತರ ವಿಕಾಸ ಸಂಘಟನೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.
