Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆ, ಖಾಸಗಿ ಚಾನೆಲ್​ ಮುಖ್ಯಸ್ಥನ ವಿರುದ್ಧ ಬ್ಲ್ಯಾಕ್​ಮೇಲ್ ಆರೋಪದಡಿ ದೂರು ದಾಖಲಿಸಿದ ವಿನಯ್ ಕುಲಕರ್ಣಿ

ಬೆಂಗಳೂರು. ಅ.10: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೇಳಿ ಬಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ವಿಚಾರ ಹೊರಬಿದ್ದಿದೆ.

ಸ್ವತಃ ವಿನಯ್ ಕುಲಕರ್ಣಿ ಅವರು ಮಹಿಳೆ, ಖಾಸಗಿ ಚಾನೆಲ್​ ಮುಖ್ಯಸ್ಥನ ವಿರುದ್ಧ ಬ್ಲ್ಯಾಕ್​ಮೇಲ್  ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎರಡು ಎಫ್ಐಆರ್ ದಾಖಲಿಸಿ ಸಂಜಯನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಒದಗಿಸುವಂತೆ ನೋಟಿಸ್ ಕಳಿಸಲಾಗಿದೆ.

ಈವರೆಗೆ ಸಂತ್ರಸ್ತೆ, ಕುಲಕರ್ಣಿಯಿಂದ ಯಾವುದೇ ಸಾಕ್ಷಿ ನೀಡಲಾಗಿಲ್ಲ. ಕರೆ ಮಾಡಿ ಹಣಕ್ಕಾಗಿ ಬ್ಲ್ಯಾಕ್​ಮೇಲ್​ ಮಾಡಿದ್ದಾರೆಂದು ವಿನಯ್ ದೂರು ನೀಡಿದ್ದಾರೆ. ಖಾಸಗಿ ಚಾನೆಲ್ ಮುಖ್ಯಸ್ಥನ ವಿರುದ್ಧ ವಿನಯ್ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ.

ಕರೆ ಬಂದ ಮೊಬೈಲ್ ನಂಬರ್ ಯಾರ ಹೆಸರಲ್ಲಿದೆ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಆಡಿಯೋ ಇದ್ದರೆ ಒದಗಿಸುವಂತೆ ಕೇಳಿದ್ದಾರೆ. ಅಧಿಕಾರಿಗಳು, ರಾಜಕೀಯ ಮುಖಂಡರಿಗೆ ಮಹಿಳೆ ಬ್ಲ್ಯಾಕ್​ಮೇಲ್​ ಮಾಡಿದ್ದಾಗಿ ವಿನಯ್ ಕುಲಕರ್ಣಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಯಾವಾಗಿನಿಂದ ಪರಿಚಯ? ನಿಮಗೆ ಹೇಗೆ ಪರಿಚಯ? ನಿಮ್ಮ ಮೇಲೆ ಅತ್ಯಾಚಾರ ನಡೆದಿದ್ದೆಲ್ಲಿ? ಅದಕ್ಕೆ ಸಂಬಂಧಿಸಿದ ಪೂರಕ ದಾಖಲೆ ಒದಗಿಸುವಂತೆ ಸಂತ್ರಸ್ತ ಮಹಿಳೆಗೂ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ.

ನನ್ನ ವಿರುದ್ಧದ ಷಡ್ಯಂತ್ರ ಇದು. ನಾನು ಆ ಮಹಿಳೆಯನ್ನು ಮುಟ್ಟಿದ್ದರೆ ನನ್ನ ತಾಯಿಯನ್ನು ಮುಟ್ಟಿದ ಹಾಗೆ. ಕೇವಲ ಎರಡು-ಮೂರು ಸಲ ನಡೆದ ವಿಡಿಯೋ ಕಾಲ್ ಸಂಭಾಷಣೆ ಇಟ್ಟುಕೊಂಡು ಹೀಗೆ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಬದುಕಿದ್ದೇನೆ. ಇದರಲ್ಲಿ ನನ್ನದೇನೂ ಪಾತ್ರ ಇಲ್ಲ. ನಾನೂ ದೂರು ಕೊಟ್ಟಿದ್ದೇನೆ. ಈ ಬಗ್ಗೆ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಬರಲಿ ಎಂದು ವಿನಯ್ ಕುಲಕರ್ಣಿಯವರು ತಮ್ಮ ವಿರುದ್ಧ ಕೇಳಿ ಬಂದ ಆರೋಪವನ್ನು ತಳ್ಳಿ ಹಾಕಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ