LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

"ದೇಶದ ಕಲೆ ಮತ್ತು ಸಂಸ್ಕೃತಿಗೆ ವಿಶ್ವಕರ್ಮರ ಕೊಡುಗೆ ಅನನ್ಯವಾಗಿದೆ"


ಮೂಡಲಗಿ : ವಿಶ್ವಕರ್ಮರು ಕಲೆ ಸಾಹಿತ್ಯಕ್ಕೆ ತಮ್ಮದೇ ಆದಂತಹ ವಿಶಿ? ಕೊಡುಗೆಯನ್ನು ನೀಡಿದ್ದಾರಲ್ಲದೇ, ತಮ್ಮ ಕುಲ ಕಸುಬುಗಳ ಮೂಲಕ ಜನೋಪಕಾರಿಯಾದ ಕುಶಲಕರ್ಮಿಗಳಾಗಿದ್ದಾರೆ ಎಂದು ಮೂಡಲಗಿ  ತಹಸೀಲ್ದಾರ್ ಶ್ರೀಶೈಲ ಗುಡುಮೆ ಅಭಿಪ್ರಾಯಸಿದರು.
ಗುರುವಾರದಂದು ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ಮೂಡಲಗಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ವಿಶ್ವಕರ್ಮ ಸಮಾಜ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿಶೇ? ಉಪನ್ಯಾಸ ನೀಡಿದ ಮೂಡಲಗಿ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ, ಸಾಹಿತಿ - ಡಾ ರಾಜು ಕಂಬಾರ ಮಾತನಾಡಿ, ಸೃಷ್ಟಿಸುವ, ರಕ್ಷಿಸುವ ಮತ್ತು ಕ್ರಿಯಾತ್ಮಕಗೊಳಿಸುವ ವಿಶ್ವಕರ್ಮ ವಿಶ್ವದ ಸೃಷ್ಟಿಕರ್ತನಾಗಿದ್ದಾನೆ. ಸೃಷ್ಟಿಕರ್ತನ ಕುಲಬಾಂಧವರಾದ ಪಂಚವರ್ಗದ ವಿಶ್ವಕರ್ಮರು   ಕಬ್ಬಿನ,ಕಟ್ಟಿಗೆ, ಶಿಲ್ಪ, ತಾಮ್ರ ಮತ್ತು ಚಿನ್ನ -ಬೆಳ್ಳಿಯ ಕಾಯಕ ಮಾಡುವುದರೊಂದಿಗೆ ಜನೋಪಕಾರಿಯಾಗಿದ್ದಾರೆ. ದೇಶದ ಕಲೆ, ಸಾಹಿತ್ಯ, ಸಂಸ್ಕೃತಿಗೆ ವಿಶ್ವಕರ್ಮರ ಕೊಡುಗೆ ಅನನ್ಯವಾಗಿದ್ದು, ಪ್ರತಿಭೆಗಳಿಗೆ ಸಮಾಜ ಸೂಕ್ತ ಗೌರವದರಗಳನ್ನು ನೀಡಬೇಕೆಂದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ನೆರಲೇಕರ,  ಶ್ರೀ ಕಾಳಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಶ್ರೀಕಾಂತ ಪತ್ತಾರ, ಶಿಲ್ಪಿಗಳಾದ ವೀರೇಶ ಬಡಿಗೇರ, ಮೌನೇಶ ಪತ್ತಾರ, ಗಜಾನನ ಪತ್ತಾರ, ಚಂದ್ರಶೇಖರ್ ಪತ್ತಾರ ಸೇರಿದಂತೆ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜ ಬಾಂಧವರು ಉಪಸ್ಥಿತರಿದ್ದರು. ಶಿರಸ್ತೇದಾರರಾದ ಶ್ರೀಕಾಂತ ಮಾಯನ್ನವರ ನಿರೂಪಿಸಿ ವಂದಿಸಿದರು.


                                       

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ