Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತವನ್ನು ವಿಶ್ವ ಮಟ್ಟದಲ್ಲಿ ಗೌರವಿಸುವಂತೆ ಮಾಡಿದ ಮೋದಿ ಮತ್ತೆ ಪ್ರಧಾನಿಯಾಗಬೇಕು: ವಿಶ್ವೇಶ್ವರ ಕಾಗೇರಿ

ಎಂ.ಕೆ.ಹುಬ್ಬಳ್ಳಿ,ಏಪ್ರಿಲ್​ 03: ಜನರ ಆಶೋತ್ತರಗಳಿಗೆ ತಕ್ಕಂತೆ ಅನೇಕ ವಿನೂತನ ಜನಪರ  ಯೋಜನೆಗಳ‌ ಮೂಲಕ ಭಾರತ ದೇಶದ ಅಭಿವೃದ್ಧಿಗೆ ಶ್ರಮಿಸಿ, ಜಾಗತಿಕ ಮಟ್ಟದಲ್ಲಿ ಭಾರತವನ್ನು ಗೌರವಿಸುವಂತೆ ಪ್ರಗತಿ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೂರನೇ ಬಾರಿಗೆ ಪ್ರಧಾನಿಯಾಗಬೇಕೆಂದು ಉತ್ತರ ಕನ್ನಡ ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.



ಪಟ್ಟಣದ ರಂಭಾಪುರಿ ವೀರಸೋಮೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ  ಕೆನರಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಾರ್ಥವಾಗಿ ಕರೆದಿದ್ದ ಬಿಜೆಪಿ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿ ಮನೆಮನೆಗೆ ತೆರಳಿ ಮಾಹಿತಿ ನೀಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮರೆತಿದೆ. ಸಿಎಂ ಸಿದ್ದರಾಮಯ್ಯ ಖುರ್ಚಿ ಯಾವಾಗ ಬಿಟ್ಟು ಕೊಡವರೆಂಬ ಚಿಂತೆ ಡಿ.ಕೆ.ಶಿವಕುಮಾರ ಅವರನ್ನು ಕಾಡುತ್ತಿದೆ. ಹೀಗಿರುವಾಗ ರಾಜ್ಯದ ಜನರ ಚಿಂತೆ ಅವರಲ್ಲಿ ಹೇಗೆ ಇರಲು ಸಾಧ್ಯ  ಎಂದರು.


ಮಾಜಿ ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ  ಪ್ರಧಾನಿ ಮೋದಿಯವರು ಆರ್ಟಿಕಲ್ 370 ಹಿಂತೆಗೆದು ಒಂದೇ ಭಾರತ ಕಾನೂನು ಜಮ್ಮು ಕಾಶ್ಮೀರದಲ್ಲಿ ಜಾರಿಗೆ, ಬಡವರಿಗೆ ಉಜ್ವಲ ಗ್ಯಾಸ,ಜೆಜೆಎಂ ಕುಡಿಯುವ ನೀರಿನ ಯೋಜನೆ,ದೇಶದ ಸುರಕ್ಷತೆ,ಆರ್ಥಿಕತೆ,ರಾಮ ಮಂದಿರ ನಿರ್ಮಾಣ,ರೈಲು ನಿಲ್ದಾಣಗಳ ಉನ್ನತಿಕರಣ,ಸುಲಭ ವಿಮಾನ ಸಂಚಾರ ,ದೇಶ್ಯಾದ್ಯಂತ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ ಅಪಾರ ಸಾಧನೆ ಮಾಡಿ ಮೂರನೇ ಬಾರಿಗೆ ಪ್ರಧಾನಿ ಆಗುವದು ಖಚಿತ ಎಂದರು.


ಈ ಸಂದರ್ಭದಲ್ಲಿ  ಬಿಜೆಪಿ ಕಿತ್ತೂರು ಮಂಡಲ ಅಧ್ಯಕ್ಷ ಡಾ. ಬಸವರಾಜ ಪರವಣ್ಣವರ, ಜೆಡಿಎಸ್ ಪಕ್ಷದ ಅಶ್ವಿನಿ ಪೂಜಾರ, ಜಿಪಂ ಮಾಜಿ ಸದಸ್ಯ ಬಿ.ಸಿ.ಪಾಟೀಲ, ಉಳವಪ್ಪ ಉಳಾಗಡ್ಡಿ, ಶ್ರೀಶೈಲ ತಿಗಡಿ, ಶಿದ್ರಾಮಯ್ಯ ಹಿರೇಮಠ, ಅಶೋಕ ಹಲಕಿ, ಮಹೇಶ ಹುದಲಿ, ಬಸನಗೌಡ ಪಾಟೀಲ, ಶಾಮಸುಂದರ ಶಿಲೇದಾರ, ಅದೃಶ್ಯಗೌಡ ಪಾಟೀಲ, ಅಪ್ಪಣ್ಣ ಪಾಗಾದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು. ಬವರಾಜ ಡೂಗಮನವರ ಕಾರ್ಯಕ್ರಮ ನಿರೂಪಿಸಿದರು.


ಇದೇ ಸಂದರ್ಭದಲ್ಲಿ  ಬಿಜೆಪಿ ಸೇರಿದ ಬಿ.ಸಿ.ಪಾಟೀಲ:ರಂಗೇರಿರುವ ಲೋಕಸಭಾ ಚುನಾವಣೆ ಸಂದರ್ಭ ಜಿಪಂ‌ ಮಾಜಿ ಸದಸ್ಯ, ಈ ಹಿಂದೆ ಕಿತ್ತೂರು ವಿಧಾನಸಭೆ ಕೆಜೆಪಿ ಅಭ್ಯರ್ಥಿಯಾಗಿದ್ದ ಕಿತ್ತೂರು ತಾಲೂಕಿನ ತುರಮರಿ ಗ್ರಾಮದ ಬಿ.ಸಿ.ಪಾಟೀಲ ಸೋಮವಾರ ಕೆನರಾ ಲೋಕಸಭಾ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ