Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರಕ್ಕೆ ಡಾ. ಪ್ರಭಾಕರ ಕೋರೆ ಭೇಟಿ

ಬೆಳಗಾವಿ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಪ್ರಭಾಕರ ಕೋರೆಯವರು ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರೊಂದಿಗೆ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಪ್ರಾತ್ಯಕ್ಷಿಕೆ ತಾಕುಗಳನ್ನು ವೀಕ್ಷಿಸಿದರು.

ಇತ್ತೀಚೆಗೆ ಅಭಿವೃದ್ಧಿ ಪಡಿಸಿದ ಮೂಲ ಸೌರ‍್ಯಗಳಾದ ರೈತ ಭವನ, ಸಿಬ್ಬಂದಿ ವಸತಿ ಗೃಹಗಳ ಉಪಯೋಗ ಕುರಿತು ವಿಜ್ಞಾನಿಗಳೊಂದಿಗೆ ಚರ್ಚಿಸಿದರು. ಬಾಳೆ, ಡ್ರಾö್ಯಗನ್ ಬೆಳೆ, ನೈಸರ್ಗಿಕ ಕೃಷಿ ಘಟಕ, ತರಕಾರಿ ಬೆಳೆಗಳಾದ ಟೊಮ್ಯಾಟೊ, ಬದನೆ, ಮೆಣಸಿನಕಾಯಿ, ಹಣ್ಣು ಬೆಳೆಗಳಾದ ಡ್ರಾö್ಯಗನ್, ಕಲ್ಲಂಗಡಿ, ಕಬ್ಬು ಬೀಜೋತ್ಪಾದನೆ ತಾಕು, ಕೃಷಿ ಹೊಂಡ, ತೋಟಪಟ್ಟಿ ಬೆಳೆಗಳಾದ ಗೊಡಂಬಿ, ನೇರಳೆ, ಮಾವು, ತಾಕುಗಳಿಗೂ ಭೇಟಿ ನೀಡಿ ಬೃಹತ್ ಹನಿ ನೀರಾವರಿ ಘಟಕದ ಕಾರ್ಯಕ್ಷಮತೆ ಕುರಿತು ಪರಿಶೀಲಿಸಿದರು.

ಹೈನುಗಾರಿಕೆ ಘಟಕ, ಹಸುಗಳ ತಳಿಗಳ ಸಾಮರ್ಥ್ಯ ಅಭಿವೃದ್ಧಿ ಕುರಿತು ಚರ್ಚಿಸಿ ಕೇಂದ್ರದಲ್ಲಿ ಅಭಿವೃದ್ಧಿಪಡಿಸಿದ ಪ್ರಾತ್ಯಕ್ಷಿಕೆ ಘಟಕಗಳು ಮಾದರಿಯಾಗಿವೆ ಎಂದರು. ಈ ನಿಟ್ಟಿನಲ್ಲಿ ಕೇಂದ್ರದ ಕಾರ್ಯಾಧ್ಯಕ್ಷರಾದ ಶ್ರೀ ಬಿ. ಆರ್. ಪಾಟೀಲ ಅವರು ಕೈಗೊಂಡ ಕ್ರಮಗಳ ಕುರಿತು ಸಂತೋಷ ವ್ಯಕ್ತಪಡಿಸಿದರು.

ನಂತರ ಹವಾಮಾನದ ವೈಪರೀತ್ಯದಿಂದಾಗಿ ಕೃಷಿ ಉತ್ಪಾದನೆಯಲ್ಲಿ ಅನಿಶ್ಚಿತತೆಯಿಂದ ಇಳುವರಿಯಲ್ಲಿ ಏರುಪೇರಾಗುತ್ತಿದ್ದು ಇದರಿಂದ ರೈತರಿಗೆ ಆಗುವ ಆರ್ಥಿಕ ಸಂಕಷ್ಟದ ಕುರಿತು ಆತಂಕ ವ್ಯಕ್ತಪಡಿಸಿದರು. ಈ ದಿಶೆಯಲ್ಲಿ ರೈತರಿಗೆ ಹವಾಮಾನ ಆಧಾರಿತ ಸಲಹೆಗಳನ್ನು ಕಾಲಕಾಲಕ್ಕೆ ನೀಡುವಂತೆ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ವಿಜ್ಞಾನಿಗಳಿಗೆ ಸಲಹೆ ನೀಡಿದರು.

ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿ ಹಾಗೂ ವಿಜ್ಞಾನಿಗಳು ವಿವಿಧ ಪ್ರಾತ್ಯಕ್ಷಿಕೆ ತಾಕುಗಳಲ್ಲಿ ಕೈಗೊಂಡ ತಂತ್ರಜ್ಞಾನದ ಮಾಹಿತಿಯನ್ನು ವಿವರಿಸಿದರು.

ಕೆಎಲ್‌ಇ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಬಿ. ಎಸ್. ತಟವಟಿ, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷರಾದ ಶ್ರೀ ಬಿ. ಆರ್. ಪಾಟೀಲ ಹಾಗೂ ಆಡಳಿತ ಮಂಡಳಿ ನಿರ್ದೇಶಕರುಗಳಾದಡಾ. ವ್ಹಿ. ಎಸ್. ಸಾಧುನವರ, ಶ್ರೀ ಎಸ್. ಸಿ. ಮೆಟಗುಡ್ಡ, ಶ್ರೀ ಮಹಾಂತೇಶ ಕವಟಗಿಮಠ, ಶ್ರೀ ಅನಿಲ ವ್ಹಿ. ಪಟ್ಟೇದ ಹಾಗೂ ಡಾ. ವ್ಹಿ. ಆಯ್. ಪಾಟೀಲ ಭೇಟಿಯಲ್ಲಿ ಉಪಸ್ಥಿತರಿದ್ದು ಪ್ರಗತಿ ಪರಿಶೀಲನೆ ನಡೆಸಿದರು.

ಭೇಟಿಯಲ್ಲಿ ಕಹೇರ್‌ನ ಕುಲಪತಿಗಳಾದ ಡಾ. ನೀತಿನ ಗಂಗನೆ, ಸಂಶೋಧನಾ ನಿರ್ದೇಶಕರಾದ ಡಾ. ಶಿವಪ್ರಸಾದ ಗೌಡರ, ಸಂಶೋಧನಾ ಸಲಹೆಗಾರರಾದ ಪದ್ಮಶ್ರೀ ಡಾ. ಮಾಧವ ಗೋಡಬೊಲೆ, ಕೆಎಲ್‌ಇ ಆಸ್ಪತ್ರೆ ನಿರ್ದೇಶಕರಾದ ಡಾ. ವ್ಹಿ. ಡಿ. ಪಾಟೀಲ ಹಾಗೂ ಅನಿವಾಸಿ ಭಾರತೀಯ ಶ್ರೀ ಮೊಹಮ್ಮದ ಫಾರುಕ ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ