Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಠಲ ಗಲಗಲಿಯವರ ಶೈಕ್ಷಣಿಕ ಸೇವೆ ಶ್ಲಾಘನೀಯ : ಶಶಿಕಾಂತ್ ಗುರೂಜಿ







ರಾಯಬಾಗ: ಸ್ವಾಮಿ ವಿವೇಕಾನಂದ ಹಾಗೂ ಸಂಗೋಳ್ಳಿ ರಾಯಣ್ಣರಂತ ಮಹಾನ ವ್ಯಕ್ತಿಗಳ ಆದರ್ಶ ತತ್ವಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಬೇಕೆಂದು ರೈತ ಹೋರಾಟಗಾರ ಶಶಿಕಾಂತ್ ಗುರೂಜಿ ಹೇಳಿದರು.

ಶುಕ್ರವಾರ ಸಾಯಂಕಾಲ ತಾಲೂಕಿನ ಹಿಡಕಲ್ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಅಜ್ಞಾನದ ಕತ್ತಲೆ ಹೋಗಲಾಡಿಸಿ ಸುಜ್ಞಾನದ ಮಹಾ ಬೆಳಕನ್ನು ಹಚ್ಚಬೇಕೆಂದರು.

 ಹಾರೂಗೇರಿಯ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಸಾಹಿತಿ ಟಿ.ಎಸ್.ವಂಟಗೂಡಿ ಮಾತನಾಡಿ, 10 ದೇವಾಲಯಗಳನ್ನು ನಿರ್ಮಿಸುವುದಕ್ಕಿಂತ ಒಂದು ಮುತ್ತಿನಂತಹ ಶಿಕ್ಷಣ ಸಂಸ್ಥೆಯನ್ನು ಹುಟ್ಟು ಹಾಕಿ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣರಾದ ಶಿಕ್ಷಣ ಪ್ರೇಮಿ, ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವಿಠಲ ಗಲಗಲಿಯವರ ಶೈಕ್ಷಣಿಕ ಸೇವೆ ಶ್ಲಾಘನೀಯವಾಗಿದೆ, ವಿದ್ಯಾರ್ಥಿಗಳು ಸತತ ಪ್ರಯತ್ನ, ಏಕಾಗ್ರತೆ, ಸಮಯಪ್ರಜ್ಞೆ ಅಳವಡಿಸಿಕೊಂಡು ಸಾಧನೆ ಮಾಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು.

 ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಗಲಗಲಿ  ವಹಿಸಿದ್ದರು.

 ಹಾರೂಗೇರಿಯ ಯುನಿವರ್ಸಲ್ ಮಹಾವಿದ್ಯಾಲಯದ ಪ್ರಾಚಾರ್ಯ ಲಕ್ಷ್ಮಣ ಪಾಟೀಲ, ವಾಸುದೇವ ಗಲಗಲಿ, ಪುಂಡಲಿಕ ಕುಳ್ಳೊಳ್ಳಿ, ಸಚಿನ ಘಂಟಿ, ಮಹಾದೇವ ಗಾಣಿಗೇರ, ಚೇತನ ಪೂಜಾರಿ, ಜೊತೆಪ್ಪ ಎತ್ತಿನಮನಿ, ಶಿವಾನಂದ ವಡ್ಡರ, ಪ್ರಭು ಸಣ್ಣಕ್ಕಿನವರ, ದಯಾನಂದ ಕೊಕಟನೂರ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಇದ್ದರು.

 ಶಿಕ್ಷಕಿ ಲಕ್ಷ್ಮಿ ಕ್ಯಾತಪ್ಪಗೋಳ ಸ್ವಾಗತಿಸಿದರು, ಭವಾನಿ ಗಲಗಲಿ ನಿರೂಪಿಸಿದರು, ಅಶ್ವಿನಿ ಕುರಾಡಿ ವಂದಿಸಿದರು.

ಫೋಟೊ: 28 ರಾಯಬಾಗ 2

ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಹಿಡಕಲ್ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ರೈತ ಹೋರಾಟಗಾರ ಶಶಿಕಾಂತ್ ಗುರೂಜಿ ಅವರನ್ನು ಗಣ್ಯರು ಸತ್ಕರಿಸುತ್ತಿರುವುದು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ