Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರಿ ಸಂಘಗಳು ಬೆಳೆಯಲು ಎಲ್ಲರೂ ಕೈಜೋಡಿಸಬೇಕು: ವಿವೇಕರಾವ ಪಾಟೀಲ

ರಾಯಬಾಗ: ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ ಬೆಳೆಯಲು ಎಲ್ಲರೂ ಕೈಜೋಡಿಸಬೇಕೆಂದು ಬೆಳಗಾವಿ ಜಿಲ್ಲಾ ಹಾ.ಉ.ಸ.ಸಂ.ಒಕ್ಕೂಟ ನಿರ್ದೇಶಕ ಹಾಗೂ ವಿಧಾನ ಪರಿಷತ್ತ ಮಾಜಿ ಸದಸ್ಯ ವಿವೇಕರಾವ ಪಾಟೀಲ ಹೇಳಿದರು.

ಶನಿವಾರ ಪಟ್ಟಣದ ಮಹಾದೇವ ಮಂಗಲ ಕಾರ್ಯಾಲಯದಲ್ಲಿ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್‌ ಹಾಗೂ ತಾಲೂಕಾ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ತಾಲೂಕಾ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಎಸ್.ಕರಬಸನವರ ಮಾತನಾಡಿ, ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲ ಅವರು ಸ್ಥಾಪಿಸಿದ ಸಹಕಾರ ಸಂಘ ಇಂದು ದೇಶಾದ್ಯಂತ ಹೆಮ್ಮರವಾಗಿ ಬೆಳೆದಿದೆ. ಸಹಕಾರ ಸಂಘಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರತಿ ವರ್ಷ ನ.14 ರಿಂದ 20 ರವರೆಗೆ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಸಹಕಾರ ಸಂಘಗಳು ನಿರಂತರವಾಗಿ ಬೆಳೆಯಬೇಕಾದರೆ ಉತ್ತಮ ಸೇವೆ ಮತ್ತು ಸಾಲವನ್ನು ನೀಡಬೇಕೆಂದರು. ಕಾರವಾರ ಮತ್ತು ಮಂಗಳೂರ ಜಿಲ್ಲೆಗಳ  ಸಹಕಾರ ಸಂಘಗಳು ನಮಗೆ ಒಳ್ಳೆಯ ಮಾದರಿಯಾಗಿವೆ ಎಂದು ತಿಳಿಸಿದರು.


ಚಿಕ್ಕೋಡಿ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಾಹುಬಲಿ ಹಂಜೆ ಮಾತನಾಡಿ, ಭಾರತ ಸ್ವಾವಲಂಬನೆ ಸಾಧಿಸಲು ಸಹಕಾರ ಸಂಘಗಳು ವಾಹಕಗಳಾಗಿವೆ. ಸಾಮೂಹಿಕ ಹಿತಾಸಕ್ತಿಯಿಂದ ಸಹಕಾರ ಸಂಘಗಳು ಬೆಳೆಯುತ್ತವೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕ ಲಕ್ಷ್ಮೀಕಾಂತ ದೇಸಾಯಿ ವಹಿಸಿದ್ದರು.


ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಬಸಗೌಡ ಪಾಟೀಲ, ಕಂಕಣವಾಡಿ ಪ.ಪಂ ಅಧ್ಯಕ್ಷ ಪ್ರಕಾಶ ಹುಕ್ಕೇರಿ, ಹಾರೂಗೇರಿ ಜನತಾ ಬ್ಯಾಂಕ ಅಧ್ಯಕ್ಷ ರಾಜಶೇಖರ ಪಾಟೀಲ, ಬಿ.ಎಸ್.ಸುಲ್ತಾನಪೂರ, ಈರನಗೌಡ ಪಾಟೀಲ, ಬಸಪ್ಪ ಕೋಣೆ, ಎಸ್.ಬಿ.ಪಾಟೀಲ, ಸಿದ್ದಣ್ಣ ನಾಗನೂರ, ಎಸ್.ಎಸ್.ಅಮರಶೆಟ್ಟಿ ಹಾಗೂ ತಾಲೂಕಿನ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯದರ್ಶಿಗಳು ಇದ್ದರು.


ಹಾಲಪ್ಪ ಜಗ್ಗಿನವರ ಸ್ವಾಗತಿಸಿದರು, ಶೈಲಜಾ ಕೊಕ್ಕರೆ ನಿರೂಪಿಸಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ