ಬೆಂಗಳೂರು, ಸೆಪ್ಟೆಂಬರ್ 17: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ದೊಡ್ಡ ಮತ ಕಳ್ಳತನ ನಡೆದಿದೆ ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತು ಭಾರಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಆರೋಪ ಮಾಡಿದ್ದರು. ಇತ್ತೀಚೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದರು. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ
(SIR) ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿದೆ.
ಮತದಾರರ ಪಟ್ಟಿ ಸಿದ್ಧತೆ: ರಾಜ್ಯ ಶಾಸಕಾಂಗ ಮತ್ತು ಸಂಸತ್ತಿಗೆ ನಿಯತಕಾಲಿಕವಾಗಿ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದಾಗಲೆಲ್ಲಾ, ಹಿಂದಿನ ಮತದಾರರ ಪಟ್ಟಿಗಳು ನಿಷ್ಕ್ರಿಯವಾಗುತ್ತವೆ ಮತ್ತು ಹೊಸದು ಮಾತ್ರ ಜಾರಿಯಲ್ಲಿರುತ್ತದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.