Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇವಿಎಂ ದೋಷಗಳಿಂದ ಮತದಾನ ವಿಳಂಬ ; ಪರದಾಡಿದ ಮತದಾರರು

ಛಪ್ರಾದ ಮತಗಟ್ಟೆಗಳ ಬಳಿ ಹಿಂಸಾಚಾರ

ಕೋಲ್ಕತ್ತಾ,

ಬಂಗಾಳದ ಅಂತಿಮ ಸಮರದಲ್ಲಿ ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ ಬಿಜೆಪಿ ಏಜೆಂಟ್ ಮೊಶರೆಫ್ ಮಿರ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಂದೂಕು ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಸೈಕತ್ ಸರ್ಕಾರ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

Advertisement

ಇತ್ತ ಎಂಟಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಅವರು ತಮ್ಮ ಏಜೆಂಟ್‌ನನ್ನು ಮತಗಟ್ಟೆಯಿಂದ ಹೊರಹಾಕಿದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದರು. ಮತಗಟ್ಟೆಯೊಳಗೆ ಅಕ್ರಮವಾಗಿ ಜನರು ನುಗ್ಗುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹಲವೆಡೆ ಇವಿಎಂ ದೋಷಗಳಿಂದ ಮತದಾನ ವಿಳಂಬವಾಗಿದ್ದು, ಮತದಾರರು ಪರದಾಡುವಂತಾಗಿದೆ. ಬಿಗಿ ಭದ್ರತೆಯ ನಡುವೆಯೂ ಘರ್ಷಣೆಗಳು ಮುಂದುವರೆದಿದ್ದು, ಬಂಗಾಳದ ಅಂತಿಮ ಹಂತದ ಮತದಾನವು ಪ್ರಕ್ಷುಬ್ಧ ವಾತಾವರಣದಲ್ಲಿ ಸಾಗುತ್ತಿದೆ. ತೃಣಮೂಲ ಕಾಂಗ್ರೆಸ್ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
" ದೇಶದ ಉನ್ನತ ಹುದ್ದೆಗಳನ್ನು ಏರಲು ಶಿಸ್ತುಬದ್ಧ ಅಧ್ಯಯನ ಹಾಗೂ ದೃಢ ಸಂಕಲ್ಪ ಅಗತ್ಯ" ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ವಿಶ್ವಾಸ ಟ್ರೋಪಿ-2026ಗೆ ಅದ್ಧೂರಿ ಚಾಲನೆ : ಅಶ್ವತ್ ವೈದ್ಯರಿಂದ ಉದ್ಘಾಟನೆಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ’ಯಿಂದ ಎರಡನೇ ಹಂತದ ತೀವ್ರ ಹೋರಾಟ ಆರಂಭಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟ