Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿ.ಎಸ್.ಕೆ ವಿವಿ ಹಾಸ್ಟೆಲ್ ಸಮಸ್ಯೆಗಳ ನಿವಾರಣೆಯ ಭರವಸೆ

ಬಳ್ಳಾರಿ, ಮೇ.20.: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಸ್ಸಿ/ಎಸ್ಟಿ ವಸತಿ ನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಖಂಡಿಸಿ, ಎಐಡಿಎಸಓ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯ ಮುಂದೆ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ನಿನ್ನೆ ಶನಿವಾರದಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ರಾಜೇಶ್ವರಿ ಮೇಡಂ ಅವರು ಭೇಟಿ ನೀಡಿ, ಎಸ್ಸಿ/ಎಸ್ಟಿ ವಸತಿ ನಿಲಯಗಳ ಕಳಪೆ ಗುಣಮಟ್ಟದ ಆಹಾರ, ನೈರ್ಮಲ್ಯ ಇಲ್ಲದಿರುವುದು ಹಾಗೂ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಆಗಿರುವ ಬದಲಾವಣೆಗಳು ಮತ್ತು ಚರ್ಮದ ಸಮಸ್ಯೆಗಳನ್ನು ಗಮನಿಸಿ, ನೀರಿನ ಶುಚಿತ್ವ ಇಲ್ಲದಿರುವುದನ್ನು ಗಮನಿಸಿದರು.
ಹಾಗೂ ವಿಶ್ವವಿದ್ಯಾನಿಲಯದ ಎಸ್ಸಿ/ಎಸ್ಟಿ ವಸತಿ ನಿಲಯಗಳ ನಿರ್ವಹಣೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ವಹಿಸುವ ಕುರಿತು ಹಾಗೂ ಸಮಸ್ಯೆಗಳ ನಿವಾರಣೆಯ ಕುರಿತು ಮಂಗಳವಾರ ದಿನಾಂಕ 19 ಮೇ 2026 ರಂದು ವಸತಿ ನಿಲಯಪಾಲಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು. ಹಾಸ್ಟೆಲ್ಗಳಲ್ಲಿ ಇರುವ 400 ವಿದ್ಯಾರ್ಥಿಗಳು ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಮನವಿ ಪತ್ರ ಕೊಟ್ಟು ಕೇಳಿಕೊಂಡರು.
ಹಾಸ್ಟೆಲಿಗೆ ಭೇಟಿ ಕೊಟ್ಟಾಗ ವಿವಿಯ ವಿದ್ಯಾರ್ಥಿಗಳಾದ ನಿಹಾರಿಕಾ ಆರ್., ಅರುಣ್ ಭಗತ್, ಭಾಗ್ಯ ಬಾಯಿ, ಮಂಜುನಾಥ, ಹನುಮೇಶ ಬನ್ನಿಕೊಪ್ಪ, ಬಾರೇಶ್, ವಿನಯ್ ಕುಮಾರ್, ಮಹೇಶ್ ನಾಯಕ ಮುಂತಾದವರು ಹಾಜರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಡಿದ್ದು ತೇಜೋಮಯಿ ಗದ್ದಿಗೆ ಆರ್ಯಭಟ ಪ್ರಶಸ್ತಿನ ಪ್ರದಾನಹುನಗುಂದ; ಒಳ್ಳೆಯ ಶಿಕ್ಷಣ ನೀಡಿದರೆ ಜೀವನ ಪರ್ಯಂತ ಅದರ ಉಪಯೋಗ  :ಶಾಸಕ ಬಾಬಾಸಾಹೇಬ ಪಾಟೀಲ ಲಕ್ಕುಂಡಿ, ಜಕನಾಯ್ಕನಕೊಪ್ಪ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಚಾಲನೆ.ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ನಿಂಗಪ್ಪ ಮಸಳಿಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ರಾಜ್ಯಪಾಲರಿಗೆ ಸಚಿವ ಸಂತೋಷ್ ಲಾಡ್ ಮನವಿ  ಹುಕ್ಕೇರಿ ತಾಲೂಕು ಸಮಗ್ರ ನೀರಾವರಿ ಯೋಜನೆ ಜಾರಿಯಾಗಲಿ :ಚೂನಪ್ಪ ಪೂಜೇರಿ.ಸರ್ಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಾಹಿಸಿ ನೊಂದ ಮಹಿಳೆಯರಿಗೆ ನ್ಯಾಯ, ಬದುಕಿನ ಬರವಸೆ ತುಂಬುವ ಆಶಾಕಿರಣಗಳಾಗಬೇಕು; ಡಾ. ನಾಗಲಕ್ಷ್ಮಿ ಚೌದರಿಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆ ಸಮರ್ಪಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ಕಟ್ಟುನಿಟ್ಟಿನ ನಿರ್ದೇಶನಚರಿತ್ರೆ ಅರಿಯಲು ವಸ್ತುಸಂಗ್ರಹಾಲಯಗಳು ಸಹಕಾರಿ: ಟಿ.ಜಿ.ವಿಠ್ಠಲ