Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಅವರಪ್ಪನಿಗೆ ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ': ಮುಸ್ಲಿಂ ಮುಖಂಡ ಮತ್ತು ಯತ್ನಾಳ್ ನಡುವೆ ಮಾತಿನ ಸಮರ; ಶಾಸಕ ಸವಾಲ್

ವಿಜಯಪುರ, ಅಕ್ಟೋಬರ್​ 15: ಸುಮ್ಮನೆ ರಾಜಕಾರಣ ಮಾಡಿಕೊಂಡು ಇರಬೇಕು, ಇಲ್ಲದೇ ಹೋದರೆ ನಿಮ್ಮ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜನಕ ಎಸ್ ಎಸ್ ಖಾದ್ರಿ  ಮತ್ತು ಮುಸ್ಲಿಂ ಮುಖಂಡರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ತಿರುಗೇಟು ನೀಡಿದ್ದಾರೆ.

“ಖಾದ್ರಿ ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು, ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ.

ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಾಮಾಜಿಕ ಮಾಧ್ಯಮ ಎಕ್ಸ್​​ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿ…… ಮುಚ್ಚಿಕೊಂಡು ಬಸನಗೌಡ ಪಾಟೀಲ್​ ಯತ್ನಾಳ ಅವರು ರಾಜಕಾರಣ ಮಾಡಬೇಕು. ಇಲ್ಲದಿದ್ದರೇ ನವೆಂಬರ್​ 6 ರಂದು ಸಿಡಿ ಬಿಡುಗಡೆ ಮಾಡುವುದು ಗ್ಯಾರೆಂಟಿ ಎಂದು ವಿಜಯಪುರ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದರು.

ವಿಜಯಪುರ ಜಿಲ್ಲೆಯ 12000 ಎಕರೆ, ವಿಜಯಪುರ ತಾಲೂಕಿನ 2643 ಎಕರೆ ವಕ್ಫ ಆಸ್ತಿ ಎಂದು ನೋಂದಣಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನೋಂದಣಿ ಮಾಡುವುದನ್ನು ಕೈಬಿಡುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪ್ರತಿಭಟನೆಗೆ​ ಕರೆ ಕೊಟ್ಟಿದ್ದಾರೆ.

ಅದರಂತೆ ಇಂದು (ಅ.15) ಸಿದ್ದೇಶ್ವರ ದೇವಸ್ಥಾನದ ಬಳಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಬಿಜೆಪಿ ನಾಯಕ ಸಿಟಿ ರವಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ನೇತೃತ್ವದ ಪ್ರತಿಭಟನೆಗೆ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕ ಬಸನಗೌಡ ಯತ್ನಾಳ್​ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*