Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಸ್ಕ್ರತಿಕ ಕಾರ್ಯಕ್ರಮಗಳು ವೀಕ್ಷಿಸುವುದು ಮನಸ್ಸಿಗೆ ನೆಮ್ಮದಿ:ಪಿ ಗಾದೆಪ್ಪ

ಬಳ್ಳಾರಿ, ಮೇ.18:  ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಆಲಾಪ್ ಸಂಗೀತ ಕಲಾಟ್ರಸ್ಟ್ ಬಳ್ಳಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವಿಶೇಷ ಘಟಕ ಯೋಜನೆ ಅಡಿಯಲ್ಲಿ "ಸಾಂಸ್ಕೃತಿಕ ಕಲಾ ವೈಭವ" ಎನ್ನುವ ಕಾರ್ಯಕ್ರಮವನ್ನು ಬಳ್ಳಾರಿಯ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರ ಪಿ. ಗಾದೆಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇವತ್ತಿನ ದಿನಮಾನದಲ್ಲಿ ಕಲೆ,ಸಾಹಿತ್ಯ,ಸಂಸ್ಕೃತಿಗೆ ಬಳ್ಳಾರಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಅದಕ್ಕೆ ಕಾರಣ ಟಿವಿ ಮತ್ತು ಮೊಬೈಲ್ ಗಳ ಹಾವಳಿ ಆದರೂ ಕೂಡ ಈ ಕಾರ್ಯಕ್ರಮಕ್ಕೆ ಇಷ್ಟು ಜನ ಸೇರಿರುವುದು ತುಂಬಾ ಸಂತೋಷವಾಗುತ್ತಿದೆ ಎಂದು ತಿಳಿಸಿ ಆಲಾಪ್ ಸಂಗೀತ ಕಲಾಟ್ರಸ್ಟ್ ಹಾಗೂ ಕನ್ನಡ ಮತ್ತು ಇಲಾಖೆ ಅಡಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವುದಕ್ಕೆ ಧನ್ಯವಾದಗಳು ತಿಳಿಸಿದರು, ಮುಖ್ಯ ಅತಿಥಿಗಳಾಗಿ ಶಿವಲಿಂಗಪ್ಪ ಹಂದಿಹಾಳ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು,
 ಬಿ.ಕುಬೇರಪ್ಪ,
ಲೇಖಕರು, ಅಧೀಕ್ಷಕರು ತಾರನಾಥ ಸರ್ಕಾರಿ ಆಯುರ್ವೇದ ಆಸ್ಪತ್ರೆ ಬಳ್ಳಾರಿ, ಡಾ. ಕೆ ಹನುಮಂತಪ್ಪ 
ರಾಜ್ಯ ಗೌರವಾಧ್ಯಕ್ಷರು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ,ಬೆಂಗಳೂರು ಸಿದ್ದರಾಮಕಲ್ಮಠ 
ಮಾಜಿ ಅಧ್ಯಕ್ಷರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಳ್ಳಾರಿ, ಶ್ರೀಮತಿ ನೇತ್ರಾವತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ, ಮುದ್ದಟನೂರು ತಿಪ್ಪೇಸ್ವಾಮಿ  ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ಕಲಾವಿದರ ಸಂಘ ಇನ್ನು ಮುಂತಾದವರು ಪಾಲ್ಗೊಂಡಿದ್ದರು. ಆಲಾಪ್ ಸಂಗೀತ ಕಲಾಟ್ರಸ್ಟ್ ನ ಅಧ್ಯಕ್ಷರಾದ ಶ್ರೀ  ರಮಣಪ್ಪ ಭಜಂತ್ರಿ ನವರು ವೇದಿಕೆ ಮೇಲಿರುವ ಗಣ್ಯರನ್ನು ಸ್ವಾಗತಿಸುತ್ತ ಸುಮಾರು ಹತ್ತು ವರ್ಷಗಳಿಂದ ನಮ್ಮ ಸಂಸ್ಥೆ ವತಿಯಿಂದ ಬಳ್ಳಾರಿ ನಗರವಲ್ಲದೇ ಅನೇಕ ಕಡೆ ಸಾಂಸ್ಕೃತಿಕ  ಕಾರ್ಯಕ್ರಮವನ್ನು ಆಯೋಜಿಸುತ್ತ  ಬಂದಿದ್ದೇವೆ ಎಂದು ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು. ವೇದಿಕೆಯ ಕಾರ್ಯಕ್ರಮದ ನಂತರ ಸುಗಮ ಸಂಗೀತ-ಜಡೇಶ ಎಮ್ಮಿಗನೂರು 
 ಕಲಾತಂಡ, ಜಾನಪದ ನೃತ್ಯ-ಅಭಿನಯ ಮತ್ತು ತಂಡ 
ತೊಗಲುಗೊಂಬೆ ಪ್ರದರ್ಶನ- ಶ್ರೀಮತಿ ಹುಲಿಗೆಮ್ಮ ಮತ್ತು ತಂಡ ಬಯಲಾಟ-ಭೀಮೇಶ್ ಸಿರಿಗೇರಿ ಇವರ ತಂಡದಿಂದ ಅದ್ಯುತವಾಗಿ ಸಾಂಸ್ಕೃತಿಕ ಕಾರ್ಯಕ್ರಗಳು ಮೂಡಿ ಬಂದವು.ಶ್ರೀ ಕೆ.ಜಿ. ಆಂಜನೇಯ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಕೂಡ್ಲಿಗಿ ಇವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ