LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಝೇಲಂ ನದಿಗೆ ನೀರು ಬಿಡುಗಡೆ; ಪಿಒಕೆಯಲ್ಲಿ ಪ್ರವಾಹ ಪರಿಸ್ಥಿತಿ, ಪಾಕ್​ಗೆ ಭೀತಿ!

ನವದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್​ಜೂ ಕಾಜ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದರು.

ಲಷ್ಕರ್​-ಎ-ತೊಯ್ಬಾ ಇದರ ಹೊಣೆ ಹೊತ್ತುಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್​ಗಳಲ್ಲಿ ಭಾರತದ ಬಗ್ಗೆ ಹಾಗೂ ನಡೆದಿರುವ ಘಟನೆಯನ್ನು ತಿರುಚುವಂತಹ ವರದಿಗಳು ಪ್ರಸಾರವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದ್ದು, ನೂರಕ್ಕೂ ಅಧಿಕ ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳನ್ನು ನಿಷೇಧಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ, ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ತಪ್ಪು ಮಾಹಿತಿ, ಗೊಂದಲದ ಅಪಹಾಸ್ಯದ ತಾಣವಾಗಿ ಮಾರ್ಪಟ್ಟಿದೆ. ಮೃತರು ಹಾಗೂ ಭಾರತೀಯ ಸೈನಿಕರನ್ನು ಅಪಹಾಸ್ಯ ಮಾಡುವುದರಿಂದ ಹಿಡಿದು ದಾಳಿಗೆ ಪ್ರಧಾನಿ ಮೋದಿಯವರನ್ನು ದೂಷಿಸುವವರೆಗೆ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದರು.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಭಾರತೀಯ ಸೇನಾ ಸಿಬ್ಬಂದಿಯನ್ನೂ ಗುರಿಯಾಗಿಸಲಾಗಿತ್ತು, ಕೆಲವು ಪೋಸ್ಟ್‌ಗಳು ಜೀವ ಉಳಿಸುವುದಕ್ಕಿಂತ ರೀಲ್‌ಗಳನ್ನು ಚಿತ್ರೀಕರಿಸುವುದರ ಮೇಲೆ ಹೆಚ್ಚು ಗಮನಹರಿಸಿವೆ ಎಂದು ಸುಳ್ಳು ಆರೋಪಿಸಿದ್ದವು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್