Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೀಸಲಾತಿಗಾಗಿ ಹೋರಾಟ ಮಾಡಲು ನಮ್ಮದು ತಕರಾರಿಲ್ಲ: ಸಿಎಂ ಸಿದ್ಧರಾಮಯ್ಯ

ವಿಜಯಪುರ: "ಪಂಚಮಸಾಲಿಯವರು ಮೀಸಲಾತಿಗಾಗಿ ಹೋರಾಟ ಮಾಡಲು ನಮ್ಮದು ತಕರಾರಿಲ್ಲ. ಆದರೆ ಹೋರಾಟ ಸಂವಿಧಾನಿಕವಾಗಿ ಇರಬೇಕು. ಪಂಚಮಸಾಲಿ ಹೋರಾಟಗಾರರಿಗೆ ಬಿಜೆಪಿ ಟೋಪಿ ಹಾಕಿದೆ" ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "2ಡಿ ಮೀಸಲಾತಿ ಕೊಟ್ಟು ಬಳಿಕ ಹೈಕೋರ್ಟ್​​​ಗೆ ಅಫಿಡವಿಟ್ ಹಾಕಿದವರು ಯಾರು? 2023ರಲ್ಲಿ ಅಫಿಡವಿಟ್​ ಹಾಕಲಾಗಿದೆ. ಆಗ ಇದೇ ಸ್ವಾಮೀಜಿ ಇದ್ದರು. 3ಬಿಯಲ್ಲಿ ಪಂಚಮಸಾಲಿಗಳಿದ್ದಾರೆ. ಹಿಂದುಳಿದ ವರ್ಗದಲ್ಲಿ ಎಷ್ಟು ಜಾತಿ ಇವೆ ಗೊತ್ತಾ? ಅದರಲ್ಲಿ ನಾಲ್ಕು ಕಟೆಗೆರಿ ಇವೆ. 1ಎ ನಲ್ಲಿ ಮೋಸ್ಟ್ ಬ್ಯಾಕ್​ವರ್ಡ್, 2ಎನಲ್ಲಿ ಕೋರ್ ಬ್ಯಾಕ್​ವರ್ಡ್, 3ಎನಲ್ಲಿ ಒಕ್ಲಲಿಗರು, 3ಬಿನಲ್ಲಿ ಲಿಂಗಾಯತರು ಇತರ ಲಿಂಗಾಯತರು ಬರುತ್ತಾರೆ. 2002ರಲ್ಲಿ ಎಸ್​.ಎಂ. ಕೃಷ್ಣ ಸಿಎಂ ಇದ್ದಾಗ ಇದೆಲ್ಲ ಆಗಿದೆ" ಎಂದು ತಿಳಿಸಿದರು.


"1992ರಲ್ಲಿ ಮೊಯ್ಲಿ ಸಿಎಂ ಇದ್ದಾಗ ಮುಸ್ಲಿಂರಿಗೆ 2ಬಿ ಮಾಡಿದ್ದಾರೆ. ಬಳಿಕ ಬಿಜೆಪಿಯವರು ಮುಸ್ಲಿಂನವರಿಗೆ ಕೊಟ್ಟಿದ್ದನ್ನು ರದ್ದು ಮಾಡಿ 2ಸಿ, 2ಡಿ ಮಾಡಿ ಅದರಲ್ಲಿನ ಶೇ.4ರ ಮೀಸಲಾತಿ ತೆಗೆದು ಇವರಿಗೆ ಕೊಟ್ಟಿದಾರೆ. ಆಗ ಯಾಕೆ ಇವರು ಪ್ರತಿಭಟನೆ ಮಾಡಲಿಲ್ಲ. ಈಗ ಅದೇ ಸರ್ಕಾರದವರು ಇವರಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಮುಸ್ಲಿಂ ಮೀಸಲಾತಿ ಕಸಿದುಕೊಂಡಿದ್ದನ್ನು ಪ್ರಶ್ನಿಸಿ ರಸೂಲ್ ಎನ್ನುವವರು ಸುಪ್ರೀಂಕೋರ್ಟ್​ಗೆ ಹೋಗಿದ್ದರು. ಆಗ ಅಲ್ಲಿ ಇವರ ಪರ ವಕೀಲರು ನಾವು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಹೇಳಿದ್ದರು. ಬಿಜೆಪಿಯವರು ಈಗ ಯಾಕೆ ಬೆಂಬಲ ಮಾಡುತ್ತಿದ್ದಾರೆ?" ಎಂದು ಪ್ರಶ್ನಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ