Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾವು ಎಂದಿಗೂ ಹಿಂಸಾಚಾರಕ್ಕೆ ಇಳಿಯಬಾರದು: ಜೋ ಬೈಡನ್

ವಾಷಿಂಗ್ಟನ್: ಮೊನ್ನೆ ಶನಿವಾರ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನದ ನಂತರ ಅಮರಿಕ ರಾಜಕೀಯ ಹಿಂಸಾಚಾರದ ಅಪಾಯಗಳ ಬಗ್ಗೆ ಅಧ್ಯಕ್ಷ ಜೋ ಬೈಡನ್ ಎಚ್ಚರಿಕೆ ನೀಡಿದರು, ಪರಿಸ್ಥಿತಿ ತಣ್ಣಗಾಗಬೇಕಾದ ಸಮಯವಿದು ಎಂದು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ಘಟನೆಯ ನಂತರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಬೈಡನ್, ರಾಜಕೀಯ ಭಾವೋದ್ರೇಕಗಳು ಹೆಚ್ಚಾಗಬಹುದು ಆದರೆ ನಾವು ಎಂದಿಗೂ ಹಿಂಸಾಚಾರಕ್ಕೆ ಇಳಿಯಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಇದು ಚುನಾವಣಾ ವರ್ಷವಾಗಿರುವುದರಿಂದ ಜನರು ಭಾವೋದ್ರೇಕಕ್ಕೆ ಒಳಗಾಗಬಹುದು ಎಂದು ಹೇಳಿದ್ದಾರೆ. ರಿಪಬ್ಲಿಕನ್ನರು ವಿಭಿನ್ನ ನೀತಿ ದೃಷ್ಟಿಕೋನಗಳನ್ನು ನೀಡುತ್ತಾರೆ, ಆದರೆ ಅಮೆರಿಕನ್ನರು ತಮ್ಮ ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸಬೇಕೆಂದು ಮನವಿ ಮಾಡಿದರು.

ಅಮೆರಿಕದಲ್ಲಿ ಈ ರೀತಿಯ ಹಿಂಸಾಚಾರಕ್ಕೆ ಯಾವುದೇ ಸ್ಥಳವಿಲ್ಲ ಮತ್ತು ವಿನಾಯಿತಿ ಇಲ್ಲ. ಈ ಹಿಂಸಾಚಾರವನ್ನು ಸಾಮಾನ್ಯ ವಿಷಯವಲ್ಲ ಎಂದರು. ಮುಂದಿನ ನವೆಂಬರ್ ತಿಂಗಳಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ನಾವೆಲ್ಲರೂ ಒಂದು ರಾಷ್ಟ್ರವಾಗಿ ನಿಲ್ಲಬೇಕು ಎಂದು ಕರೆ ನೀಡಿದರು. ಸಂಪೂರ್ಣ ಮತ್ತು ತ್ವರಿತ ಪರಿಶೀಲನೆಗೆ ಭರವಸೆ ನೀಡಿದರು, ಸಾರ್ವಜನಿಕ ಊಹಾಪೋಹದ ಅಗತ್ಯವಿಲ್ಲ ಎಂದರು. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಶನಿವಾರ ರಾತ್ರಿ ಟ್ರಂಪ್ ರ್ಯಾಲಿಯಲ್ಲಿ ಗುಂಡು ಹಾರಿಸಿ ಕೊಲ್ಲಲ್ಪಟ್ಟ ಮಾಜಿ ಅಗ್ನಿಶಾಮಕ ಮುಖ್ಯಸ್ಥ ಕೋರಿ ಕಾಂಪರೇಟೋರ್ ಅವರ ಕುಟುಂಬಕ್ಕಾಗಿ ನಾನು ಮತ್ತು ಜಿಲ್ ಬೈಡನ್ ಪ್ರಾರ್ಥಿಸುವುದಾಗಿ ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ