ಸಿರುಗುಪ್ಪ: 18:ನಗರದ ನಿಟ್ಟೂರು ನರಸಿಂಹಮೂರ್ತಿ ಬಯಲು ಜಾಗದಲ್ಲಿ ಆಯೋಜಿಸಿರುವ 9ನೇ ವರ್ಷದ ಬೃಹತ್ ಹಿಂದೂ ಮಹಾ ಗಣಪತಿ ಉತ್ಸವದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಸ್ಥರು ಭಕ್ತಿಯಿಂದ ಮಳೆಗಾಗಿ ಸಪ್ತಾಹ ಭಜನೆ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿ ಕೆರೆ-ಕಟ್ಟೆಗಳು ತುಂಬಲಿ, ರೈತರ ಬೆಳೆಗಳು ಹಸನಾಗಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಗಣಪತಿ ಮಂಟಪದಲ್ಲಿ ನಿರಂತರವಾಗಿ ಜರುಗಿದ ಸಪ್ತಾಹ ಭಜನೆಯಲ್ಲಿ ಸಾಂಪ್ರದಾಯಿಕ ಜಾನಪದ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಘ್ನನಿವಾರಕನಲ್ಲಿ ಮಳೆಗಾಗಿ ಕಳಕಳಿಯ ವಿನಂತಿ ಮಾಡಿಕೊಳ್ಳಲಾಯಿತು.
ಸಿರುಗುಪ್ಪ ನಗರ ಹಾಗೂ ಸುತ್ತಮುತ್ತಲಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ನೂರಾರು ಭಜನಾ ಮಂಡಳಿಗಳು ಮತ್ತು ಗ್ರಾಮಸ್ಥರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಸಿರುಗುಪ್ಪ ನಗರದ ನಿಟ್ಟೂರು ನರಸಿಂಹಮೂರ್ತಿ ಬಯಲು ಜಾಗದಲ್ಲಿ ಆಯೋಜಿಸಿದ್ದ 9ನೇ ವರ್ಷದ ಬೃಹತ್ ಹಿಂದೂ ಮಹಾ ಗಣಪತಿ ಉತ್ಸವದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಸ್ಥರು
ಮಳೆಗಾಗಿ ಸಪ್ತಾಹ ಭಜನೆ ಮೂಲಕ ಪ್ರಾರ್ಥನೆ ಸಲ್ಲಿಸಿದರು