Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನ್ನಪೂರ್ಣ ಶಿಕ್ಷಣ ಸಂಸ್ಥೆಯಲ್ಲಿ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಅಥಣಿ,08: ಅನ್ನಪೂರ್ಣ ಸಮೂಹ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ನೂತನ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭ (Freshers’ Day) ಅದ್ದೂರಿಯಾಗಿ ನೆರವೇರಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ಚಿಕ್ಕ ಮಕ್ಕಳ ತಜ್ಞ ವೈದ್ಯರಾದ ಡಾ. ಸಚಿನ್ ಮಿರಜಕರ ಅವರು ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ರೂಪಿಸುವ ಮಹತ್ವದ ಹಂತವಾಗಿದ್ದು, ಶಿಸ್ತು, ಸಮಯಪಾಲನೆ ಹಾಗೂ ನಿರಂತರ ಅಧ್ಯಯನದ ಮೂಲಕ ಯಶಸ್ಸು ಸಾಧಿಸಬಹುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನ್ನಪೂರ್ಣ ಸಮೂಹ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಪಾಂಗಿ ಅವರು ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಹಾಗೂ ಖ್ಯಾತ ವೈದ್ಯರಾದ ಡಾ. ರವಿ ಪಾಂಗಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಮೋನಿಕಾ ತಾಂಬಾಟ್, ಬಿ.ಎಸ್‌.ಸಿ. ನರ್ಸಿಂಗ್ ವಿಭಾಗದ ಪ್ರಾಂಶುಪಾಲರಾದ ಮಹಾಂತೇಶ ಮಿರ್ಜಿ, ಪದವಿ ವಿಭಾಗದ ಪ್ರಾಂಶುಪಾಲರಾದ ಜಮೀರ್ ಮುಲ್ಲಾ, ಪ್ಯಾರಾಮೆಡಿಕಲ್ ವಿಭಾಗದ ಪ್ರಾಂಶುಪಾಲರಾದ ಕಿರಣ್ ಕೆಂಪಿ ಹಾಗೂ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ತುಷಾರ್ ಪಾಟೀಲ್ ಉಪಸ್ಥಿತರಿದ್ದರು.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಜಮೀರ್ ಮುಲ್ಲಾ, ತುಷಾರ್ ಪಾಟೀಲ್, ಸಮೀರ್ ಮಣ್ಣೂರ, ಸುನೀತಾ ತೇಲಿ, ಅನುಷಾ ಮಮದಾಪೂರ, ದೀಪಶ್ರೀ, ಶ್ರೇಯಸ್ ಸಂಗಣ್ಣವರ, ಅನುರಾಧಾ ಶಿಂಗೆ, ರಷ್ಮಿ ಕಾವ್ಯಗೋಳ, ಆಸಿಫ ಯಾದವಾಡ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಭಾಗ್ಯಶ್ರೀ ಕಿತ್ತೂರು ಅವರು ನಿರೂಪಿಸಿದರು. ಶ್ರೀರಕ್ಷ ಮಾನೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಹನಾ ಕಾಂಬಳೆ ಅವರು ಪ್ರಾರ್ಥನಾ ಗೀತೆ ಹಾಡಿದರು. ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳ ಸಂಯೋಜನೆಯನ್ನು ಕಿರಣ್ ಕೆಂಪಿ ಅವರು ನಿರ್ವಹಿಸಿದರು. ಕೊನೆಯಲ್ಲಿ ಸ್ನೇಹ ಪಾಟೀಲ್ ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು, ಪರಿಚಯ ಕಾರ್ಯಕ್ರಮಗಳು ಹಾಗೂ ಮನರಂಜನಾ ಸ್ಪರ್ಧೆಗಳು ಜರುಗಿದವು. ನೂತನ ವಿದ್ಯಾರ್ಥಿಗಳು ತಮ್ಮ ಪರಿಚಯವನ್ನು ನೀಡುವ ಮೂಲಕ ಕಾಲೇಜು ಜೀವನದ ಹೊಸ ಆರಂಭದ ಸಂತಸವನ್ನು ವ್ಯಕ್ತಪಡಿಸಿದರು.
ಕೊನೆಯಲ್ಲಿ ಸಂಸ್ಥೆಯ ವತಿಯಿಂದ ಎಲ್ಲಾ ನೂತನ ವಿದ್ಯಾರ್ಥಿಗಳಿಗೆ ಹಾರ್ದಿಕ ಸ್ವಾಗತ ಕೋರಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ