Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೊಳಿಸಿ ಜಲ್ಸರ್ ಪಾರ್ಟಿ ಆಫ್ ಇಂಡಿಯಾ ಜಾಗೃತಿ ಜಾಥ




 ಬಳ್ಳಾರಿ.ಅ. 07.: ದೇಶಕ್ಕೆ ಸ್ವತಂತ್ರ ಬಂದು 78 ವರ್ಷ ಕಳೆದರೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಯಾಗಿಲ್ಲ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕ ಸಂವಿಧಾನದ 98ನೇ ತಿದ್ದುಪಡಿ ಮೂಲಕ 2013ರಲ್ಲಿ 371 ಜೆ ವಿಶೇಷ ಸ್ಥಾನಮಾನ ದೊರೆತು 12 ವರ್ಷಗಳಲ್ಲಿ 25 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದ್ದರೂ ಸಹ ಅಭಿವೃದ್ಧಿ ಕೆಲಸಗಳಾಗಿಲ್ಲ ಈ ಭಾಗದ ಕಾರ್ಮಿಕರು ಕೆಲಸಕ್ಕಾಗಿ ಗುಳೆ ಹೋಗುವುದು ತಪ್ಪಿಲ್ಲ ವಿದ್ಯಾವಂತ ಯುವಕರಿಗೆ ಉದ್ಯೋಗ ಸಿಕ್ಕಿಲ್ಲ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರಗಳಿಲ್ಲ ಅಪೌಷ್ಟಿಕತೆಯಿಂದ ಬಾಣಂತಿಯರು ಮತ್ತು ಮಕ್ಕಳು ಸಾವುಗಳಾಗುತ್ತಿವೆ ಅನ್ನದಾತನ ಆತ್ಮಹತ್ಯೆಗಳಾಗುತ್ತಿವೆ ಹಿಂದುಳಿದ ಅಲ್ಪಸಂಖ್ಯಾತ ದಲಿತ ಆದಿವಾಸಿಗಳಿಗೆ ಇನ್ನೂ ಸಹ ಸಾಮಾಜಿಕ ನ್ಯಾಯ ದೊರಕಿಲ್ಲ ಸರ್ಕಾರ ಪ್ರತಿಬಾರಿ ಹೊಸ ಯೋಜನೆಗಳನ್ನು ಜಾರಿಗೆ ತಂದರು ದೊಡ್ಡ ಅನುದಾನಗಳನ್ನು ಘೋಷಣೆ ಮಾಡಿದರು ಸಹ ಅವುಗಳಿಂದ ಈ ಭಾಗಕ್ಕೆ ಏನೇನು ಪ್ರಯೋಜನವಾಗಿಲ್ಲ ಸರ್ಕಾರ ಈ ಭಾಗದ ಜನತೆಗೆ ಮೂಗಿಗೆ ತುಪ್ಪ ಸವರುವುದನ್ನು ಬಿಟ್ಟು ಸಮರ್ಪಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ತಾಹಿರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದರು.


 ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಕೊಪ್ಪಳ ರಾಯಚೂರು ಯಾದಗಿರಿ ಮತ್ತು ಕಲ್ಬುರ್ಗಿ ಜಿಲ್ಲೆಗಳು ಅತ್ಯಂತ ಹಿಂದುಳಿದ ಜಿಲ್ಲೆಗಳಾಗಿದ್ದು ಈ ಜಿಲ್ಲೆಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 9,000 ಶಿಶು ಮತ್ತು 600 ತಾಯಂದಿರು ಪೋಷಕಾಂಶಗಳ ಕೊರತೆಯಿಂದ ಅಸೂಲಿಗಿರುತ್ತಾರೆ 1963 ಆರೋಗ್ಯ ಕೇಂದ್ರಗಳ ಅವಶ್ಯಕತೆ ಇದ್ದು ಈಗ ಕೇವಲ 1519 ಕೇಂದ್ರಗಳಿವೆ  ಇವುಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು, ಖಾಲಿ ಇರುವ 80000 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು, ಅವಶ್ಯಕತೆ ಇರುವ ವಿದ್ಯಾರ್ಥಿ ನೆಲೆಗಳನ್ನು ಆರಂಭಿಸಬೇಕು ಮಾನವ ಅಭಿವೃದ್ಧಿ ಸೂಚ್ಯಂಕ ಮತ್ತು ತಲಾ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಈ ಪ್ರದೇಶವನ್ನು ಅಭಿವೃದ್ಧಿಗೊಳಿಸಬೇಕು ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಮಾಡಿಕೊಡಬೇಕು ಎಂಬ 11 ಅಂಶಗಳ ಬೇಡಿಕೆಯನ್ನು  ರಾಜ್ಯ ಸರ್ಕಾರದ ಮುಂದಿಟ್ಟು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಜಾತವನ್ನು ಹಮ್ಮಿಕೊಳ್ಳಲಾಗಿದೆ ಎಂದರು.


 ಈ ಪತ್ರಿಕಾಗೋಷ್ಠಿಯಲ್ಲಿ  ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಸೈಯದ್ ಅಮ್ಜದ್ ಹುಸೇನ್, ರಾಜ್ಯ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲಿಯಾನ್ ಸೈಯದ್ ಇರ್ಫಾನ್ ಸೇರಿದಂತೆ ಇತರರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ