LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

15 ವರ್ಷ ಹಳೆಯ ವಾಹನಗಳು ಸ್ಕ್ರ್ಯಾಪಿಂಗ್: ಏನಿದು ಹೊಸ ನೀತಿ?

ಶಿಮ್ಲಾ, ಹಿಮಾಚಲ ಪ್ರದೇಶ: ದೇಶದಲ್ಲಿ ಹೆಚ್ಚುತ್ತಿರುವ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳಿಂದಾಗಿ ಪರಿಸರ ಮಾಲಿನ್ಯದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ ಮತ್ತು ವಾಹನ ಉದ್ಯಮದ ಪುನರಾಭಿವೃದ್ಧಿಗಾಗಿ ಹಳೆಯ ಮತ್ತು ಬಳಕೆಯಾಗದ ವಾಹನಗಳನ್ನು ರಸ್ತೆಗೆ ಇಳಿಯದಂತೆ ಮಾಡಲು ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯವನ್ನು ಜಾರಿಗೆ ತರಲಾಗಿದೆ.


ಈ ನಿಯಮದ ಅಡಿ ರಸ್ತೆಗಳಲ್ಲಿ 15 ವರ್ಷ ಹಳೆಯದಾದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ನಿರ್ಬಂಧಿಸಲಾಗಿದೆ. ಕೇಂದ್ರ ಸರ್ಕಾರವು 25 ಸೆಪ್ಟೆಂಬರ್ 2021 ರಂದು ಈ ನಿಯಮವನ್ನು ಜಾರಿಗೆ ತಂದಿದೆ. ಆದಾಗ್ಯೂ, ಪ್ರಸ್ತುತ ಈ ನೀತಿಯು ಸರ್ಕಾರಿ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ. ಈ ನೀತಿಯನ್ನು ಅಳವಡಿಸಿಕೊಳ್ಳಲು ಖಾಸಗಿ ವಾಹನ ಮಾಲೀಕರು ಸ್ವಯಂಪ್ರೇರಣೆಯಿಂದ 15 ವರ್ಷಕ್ಕಿಂತ ಹಳೆಯದಾದ ಸ್ಕ್ರ್ಯಾಪ್ ವಾಹನಗಳಿಗೆ ಅರ್ಜಿ ಸಲ್ಲಿಸಬಹುದು.


15 ವರ್ಷಗಳು ಪೂರ್ಣಗೊಂಡ ನಂತರ ನೋಂದಣಿ ಸ್ವಯಂಚಾಲಿತವಾಗಿ ರದ್ದಾಗುತ್ತದೆ : ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ 16 ಜನವರಿ 2023 ರಂದು GSR 29 (E) ಅಡಿ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯದ (RVSF) ನಿಯಮಗಳಿಗೆ ತಿದ್ದುಪಡಿ ಮಾಡುವ ಕುರಿತು ಅಧಿಸೂಚನೆ ಹೊರಡಿಸಿದೆ.


ಈ ಅಧಿಸೂಚನೆಯ ಪ್ರಕಾರ 31 ಮಾರ್ಚ್ 2023 ಕ್ಕೆ 15 ವರ್ಷಗಳು ಪೂರ್ಣಗೊಂಡ ನಂತರ ಸರ್ಕಾರಿ ವಾಹನಗಳ ನೋಂದಣಿ ಪ್ರಮಾಣಪತ್ರವನ್ನು ರದ್ದುಗೊಳಿಸಲಾಗುತ್ತದೆ. ಅದೇ ರೀತಿ ಸರ್ಕಾರಿ ವಾಹನಗಳ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ತಕ್ಷಣ ನೋಂದಣಿ ಪ್ರಮಾಣ ಪತ್ರವನ್ನೇ ರದ್ದುಪಡಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಈ ನಿಯಮಗಳು 1 ಏಪ್ರಿಲ್ 2023 ರಿಂದ ಜಾರಿಗೆ ಬಂದಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್