Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್​ಡಿ ಕುಮಾರಸ್ವಾಮಿ, ಸಂಜಯ್​ ಪಾಟೀಲ್​ ಗೆ ಮಹಿಳಾ ಆಯೋಗ ನೋಟಿಸ್

ಬೆಂಗಳೂರು, ಏಪ್ರಿಲ್​ 15: ಮಹಿಳೆಯರ ಘನತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತಂದ ಆರೋಪದಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ್​ ಪಾಟೀಲ್​ ಅವರಿಗೆ ಮಹಿಳಾ ಆಯೋಗ ನೋಟಿಸ್​ ನೀಡಿದೆ. ಇಬ್ಬರೂ ನಾಯಕರು ಖುದ್ದು ಮಹಿಳಾ ಆಯೋಗಕ್ಕೆ ಏಳು ದಿನಗಳೊಳಗೆ ವಿವರಣೆ ನೀಡಬೇಕು. ತಪ್ಪು ಸಾಬೀತಾದರೆ ಜೈಲು ಶಿಕ್ಷೆಯಾಗುತ್ತೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರಿತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಿಳೆಯರ ಬಗ್ಗೆ ಕೀಳುಮಟ್ಟದ ಭಾಷೆ ಬಳಕೆ ಮಾಡಬಾರದು. ಗಂಭಿರ ಸ್ವರೂಪ ಪಡೆದ್ರೆ ಜೈಲು ಶಿಕ್ಷೆ ಆಗುತ್ತದೆ. ಹೆಣ್ಣುಮಕ್ಕಳಿಗೆ ಅವಮಾನ ಮಾಡಿದರೆ ಹೇಗೆ? ಒಬ್ಬರು ಪೆಗ್ ಅಂತಾರೆ, ಮತ್ತೊಬ್ಬರು ಗ್ಯಾರಂಟಿ ಯೋಜನೆ ವಿಚಾರದಲ್ಲಿ ಮಹಿಳಯರನ್ನು ಅವಮಾನ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಹೆಣ್ಣಮಕ್ಕಳನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲೆ ಮಾಡುವುದು ಸರ್ಕಾರದ ಗುರಿ. ಸಂವಿಧಾನ ಕೂಡ ಇದನ್ನೇ ಹೇಳಿದೆ. ಪ್ರಮಾಣ ವಚನದ ಸ್ವೀಕಾರದ ವೇಳೆ ಹೆಣ್ಣುಮಕ್ಕಳಿಗೆ ಗೌರವ ನೀಡುವುದಾಗಿ ಹೇಳತ್ತಾರೆ. ರಾಜಕೀಯ ಲಾಭಕ್ಕೆ ಹೆಣ್ಣುಮಕ್ಕಳನ್ನು ಬಳಕೆ ಮಾಡಬಾರದು ಎಂದರು.

ಶನಿವಾರ (ಏ.13) ರಂದು ಹಿಂಡಲಗಾದಲ್ಲಿ ನಡೆದಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್ ಮಾತನಾಡಿ, “ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ.‌ ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು” ಎಂದು ಹೇಳಿದ್ದರು.

ಸಂಜಯ ಪಾಟೀಲ್ ಹೇಳಿಕೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ತುಮಕೂರಿನಲ್ಲಿ ನಡೆದಿದ್ದ ಪ್ರಚಾರ ಸಭೆಯಲ್ಲಿ, ಗ್ಯಾರಂಟಿಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ