LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಭಾರತದ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವ ಗಮನಾರ್ಹ ಪ್ರಗತಿ: ರುಚಿರಾ ಕಾಂಬೋಜ್

ನ್ಯೂಯಾರ್ಕ್,04: ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು ಭಾರತದ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವದಲ್ಲಿ ಆಗಿರುವ ಗಮನಾರ್ಹ ಪ್ರಗತಿಯ ಕುರಿತು ಬೆಳಕು ಚೆಲ್ಲಿದ್ದಾರೆ. "ಭಾರತವು ಪಂಚಾಯತ್ ರಾಜ್ ಎಂದು ಕರೆಯಲ್ಪಡುವ ಗ್ರಾಮೀಣ ಆಡಳಿತದ ಒಂದು ಅನನ್ಯ ವ್ಯವಸ್ಥೆಯ ಬಗ್ಗೆ ಹೆಮ್ಮೆಪಡುತ್ತದೆ. ತಳಮಟ್ಟದಲ್ಲಿ ವಿಕೇಂದ್ರೀಕೃತ ಅಧಿಕಾರದ ಚಿಹ್ನೆಯಾಗಿದೆ'' ಎಂದು ಹೇಳಿದ್ದಾರೆ.


ನ್ಯೂಯಾರ್ಕ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಮಹಿಳೆಯರು ಸ್ಥಳೀಯ ಆಡಳಿತವನ್ನು ಮುನ್ನಡೆಸುತ್ತಿದ್ದಾರೆ. ತಳಮಟ್ಟದಲ್ಲಿ ಮಹಿಳಾ ಸಬಲೀಕರಣದ ಪರಿವರ್ತಕ ಪರಿಣಾಮದ ಕುರಿತು ಕಾಂಬೋಜ್ ವಿವರಿಸಿದರು. "ಪಂಚಾಯತ್​ ರಾಜ್ ಗ್ರಾಮ ಸಭೆಯ ಮೂಲಕ ಪಂಚಾಯತ್‌ನ ಎಲ್ಲಾ ನಿವಾಸಿಗಳಿಂದ ಸಕ್ರಿಯವಾಗಿ ಭಾಗವಹಿಸಲು ಅನುಕೂಲವಾಗುವ ನೇರ ಪ್ರಜಾಪ್ರಭುತ್ವದ ಒಂದು ಅತ್ಯುತ್ತಮ ಉದಾಹರಣೆಯಾಗಿದೆ" ಎಂದು ಕಾಂಬೋಜ್ ಎತ್ತಿ ತೋರಿಸಿದ್ದಾರೆ.


ವ್ಯವಸ್ಥೆಯ ವಿಕೇಂದ್ರೀಕೃತ ಅಧಿಕಾರ ರಚನೆಯ ಕುರಿತು ಒತ್ತಿಹೇಳಿದರು. ಈ ವಿಶಿಷ್ಟ ಅಂಶವು ಪ್ರಪಂಚದ ಬೇರೆಡೆ ಕಂಡು ಬರುವ ಸಾಂಪ್ರದಾಯಿಕ ಆಡಳಿತ ಮಾದರಿಗಳಿಂದ ಇದನ್ನು ಪ್ರತ್ಯೇಕಿಸುತ್ತದೆ. ಇದು ಅಂತರ್ಗತ ನಿರ್ಧಾರ - ಮಾಡುವ ಪ್ರಕ್ರಿಯೆಗಳನ್ನು ಉತ್ತೇಜಿಸುವ ಮಾದರಿಯಾಗಿದೆ'' ಎಂದು ಅವರು ಪ್ರತಿಪಾದಿಸಿದ್ದಾರೆ.


 "1992 ರಲ್ಲಿ ಸಾಂವಿಧಾನಿಕ ತಿದ್ದುಪಡಿಯೊಂದಿಗೆ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಇದು ಸ್ಥಳೀಯ ಆಡಳಿತದಲ್ಲಿ ಎಲ್ಲ ಚುನಾಯಿತ ಪಾತ್ರಗಳಲ್ಲಿ ಕನಿಷ್ಠ ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ಕಡ್ಡಾಯಗೊಳಿಸಿತು. ಈ ಸಾಂವಿಧಾನಿಕ ನಿಬಂಧನೆಯು ತಳಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಒಂದು ಹೆಗ್ಗುರುತಾಗಿದೆ. ಭಾರತದೊಳಗಿನ 21 ರಾಜ್ಯಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಶೇಕಡಾ 50ಕ್ಕೆ ಏರಿದೆ'' ಎಂದು ತಿಳಿಸಿದರು.


"ಇಂದು 3.1 ಮಿಲಿಯನ್ ಚುನಾಯಿತ ಪ್ರತಿನಿಧಿಗಳಲ್ಲಿ 1.4 ಮಿಲಿಯನ್‌ಗಿಂತಲೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದಾರೆ. ಮಹಿಳೆಯರ ಭಾಗವಹಿಸುವಿಕೆಯು ಹೆಚ್ಚುತ್ತಿರುವುದು ಆಡಳಿತ ಮತ್ತು ಸಮುದಾಯದ ಅಭಿವೃದ್ಧಿಗೆ ಕೊಡುಗೆಗಳನ್ನು ಗುರುತಿಸುವ ಮತ್ತು ಮೌಲ್ಯೀಕರಿಸುವ ಕಡೆಗೆ ವಿಶಾಲವಾದ ಸಾಮಾಜಿಕ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯೊಳಗಿನ ಸ್ಥಳೀಯ ಯೋಜನಾ ಪ್ರಕ್ರಿಯೆಯ ಕುರಿತು ಕಾಂಬೋಜ್ ವಿವರಿಸಿದಂತೆ, ಸುಸ್ಥಿರ ಅಭಿವೃದ್ಧಿ ಗುರಿಗಳ ಸ್ಥಳೀಕರಣದೊಂದಿಗೆ ನಿಖರವಾಗಿ ಜೋಡಿಸಲ್ಪಟ್ಟಿದೆ. ಇದು ಮಹಿಳೆಯರ ಸಬಲೀಕರಣದ ಮೇಲೆ ಗಮನಹರಿಸಲು ಸಾಧ್ಯವಾಗತ್ತದೆ'' ಎಂದರು.


ಸಾಂಪ್ರದಾಯಿಕ ಅಡೆತಡೆಗಳನ್ನು ಮುರಿಯುವಲ್ಲಿ ಮಹಿಳಾ ನಾಯಕರ ಪ್ರಯತ್ನಗಳನ್ನು ಶ್ಲಾಘಿಸಿದ ಕಾಂಬೋಜ್ ಅವರು, ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ ಮತ್ತು ಜೀವನೋಪಾಯವನ್ನು ಹೆಚ್ಚಿಸುವ ಮೂಲಕ ಸಮುದಾಯಗಳನ್ನು ಕ್ರಾಂತಿಗೊಳಿಸುವಲ್ಲಿ ಮಹಿಳೆಯರ ಪಾತ್ರದ ಬಗ್ಗೆ ವಿವರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್