LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ: ರಾಜ್ಯ ಸರ್ಕಾರ ಇದೀಗ ಅಧಿಸೂಚನೆ

ಬೆಂಗಳೂರು: ಗಿಗ್ ಕಾರ್ಮಿಕರ ಸಾಮಾಜಿಕ‌ ಭದ್ರತೆ ಕಲ್ಪಿಸುವ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ಅಧ್ಯಾದೇಶ, 2025ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಇದೀಗ ಅಧಿಸೂಚನೆ ಹೊರಡಿಸಿದೆ.


ಈ ಸುಗ್ರೀವಾಜ್ಞೆಯಿಂದ ಪ್ಲಾಟ್‌ಫಾರ್ಮ್ ಆಧಾರಿತ ಸೇವೆಗಳಾದ ಸ್ವಿಗ್ಗಿ, ಜೊಮಾಟೊಗಳಲ್ಲಿ ಫುಡ್‌ ಡೆಲವರಿ ಮಾಡುವ, ರೈಡ್‌ ಶೇರಿಂಗ್‌ ಸೇವೆಗಳಾದ ಓಲಾ, ಉಬರ್‌, ರ್‍ಯಾಪಿಡೋ ಯಾತ್ರಿ ಇತ್ಯಾದಿ ಅಪ್ಲಿಕೇಷನ್ ಆಧಾರಿತ ಚಾಲಕರು, ಇ–ಕಾಮರ್ಸ್‌ ಸಂಸ್ಥೆಗಳಾದ ಅಮೆಜಾನ್‌, ಪ್ಲಿಪ್‌ಕಾರ್ಟ್‌, ಬಿಗ್‌ ಬಾಸ್ಕೆಟ್‌ ಮತ್ತಿತ್ತರ ಕ್ಷೇತ್ರಗಳಲ್ಲಿ ಪೂರ್ಣಕಾಲಿಕ ಅಥವಾ ಅರೆಕಾಲಿಕ ಡೆಲವರಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಕಾರ್ಮಿಕ ಕಾನೂನುಗಳಡಿ ಲಭ್ಯವಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲಿದ್ದಾರೆ.


ರಾಜ್ಯ ಸರ್ಕಾರ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಬೇಕು. ಈ ಮಂಡಳಿಗೆ ಕಾರ್ಮಿಕ ಸಚಿವರು ಅಧ್ಯಕ್ಷರಾಗಿರಲಿದ್ದಾರೆ. ಮಂಡಳಿಯಲ್ಲಿ ಅಧ್ಯಕ್ಷರು ಸೇರಿ 9 ಮಂದಿ ಸದಸ್ಯರಿರಲಿದ್ದಾರೆ. ಸಂಗ್ರಹಕಾರರು ಅಥವಾ ವೇದಿಕೆಗಳು ತಮ್ಮಲ್ಲಿ ಕಾರ್ಯನಿರ್ವಹಿಸುತ್ತಿರುವ ಅಥವಾ ನೋಂದಾಯಿಸಿದ ಎಲ್ಲಾ ಗಿಗ್ ಕಾರ್ಮಿಕರ ದತ್ತಾಂಶವನ್ನು ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ನಲವತ್ತೈದು ದಿನಗಳೊಳಗಾಗಿ ನಿಯಮಿಸಬಹುದಾದಂಥ ವಿಧಾನದಲ್ಲಿ ಮಂಡಳಿಗೆ ಒದಗಿಸಬೇಕು. ಯಾವುದೇ ವೇದಿಕೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಥವಾ ನೋಂದಾಯಿಸಿದ ಎಲ್ಲಾ ವೇದಿಕೆ ಆಧಾರಿತ ಗಿಗ್ ಕಾರ್ಮಿಕರು ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ವಿದ್ಯುನ್ಮಾನದ ಮೂಲಕ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳಬೇಕು.


ಸರ್ಕಾರವು, ನೋಂದಾಯಿಸಿದ ವೇದಿಕೆ ಆಧಾರಿತ ಗಿಗ್ ಕಾರ್ಮಿಕರಿಗಾಗಿ ಕರ್ನಾಟಕ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸಂಗ್ರಹಕಾರರು ಅಥವಾ ವೇದಿಕೆಗಳಿಂದ "ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಶುಲ್ಕ" ವೆಂದು ಕರೆಯುವ ಕ್ಷೇಮಾಭಿವೃದ್ಧಿ ಶುಲ್ಕವನ್ನು ವಿಧಿಸಬೇಕು. ಅಧ್ಯಾದೇಶವು ಜಾರಿಗೆ ಬಂದ ಆರು ತಿಂಗಳೊಳಗಾಗಿ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಪ್ರತಿಯೊಂದು ವಹಿವಾಟಿನಲ್ಲಿ ಪಾವತಿ ನೀಡಿಕೆಯ ಶೇಕಡಾ ಒಂದರಷ್ಟಕ್ಕೆ ಕಡಿಮೆಯಲ್ಲದ, ಆದರೆ, ಶೇಕಡಾ ಐದರಷ್ಟನ್ನು ಮೀರದಂತೆ ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲಾಗುವುದು. ಗಿಗ್‌ ಕಾರ್ಮಿಕರು ಅಪಘಾತದಿಂದ ಮರಣ ಹೊಂದಿದರೆ ಅಪಘಾತ ಪರಿಹಾರ ಮತ್ತು ಜೀವ ವಿಮೆ ಸೇರಿ ₹4 ಲಕ್ಷ ಮತ್ತು ₹2 ಲಕ್ಷ ಮೊತ್ತದ ಜೀವ ವಿಮೆ ಒದಗಿಸಲಾಗುವುದು.‌


ಕಡ್ಡಾಯ ಗ್ರಾಮೀಣ ಸೇವೆ ಸಡಿಲಗೊಳಿಸುವ ಸುಗ್ರೀವಾಜ್ಞೆ: ಗ್ರಾಮೀಣ ಸೇವೆ ಸಡಿಲಗೊಳಿಸುವ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2025ಕ್ಕೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್