Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ರೆಡ್ ಕ್ರಾಸ್ ದಿನಾಚರಣೆ 

ಬಳ್ಳಾರಿ, ಮೇ.12. : ವೀ.ವಿ.ಸಂಘಧ, ವೀರಶೈವ ಮಹಾವಿದ್ಯಾಲಯದಲ್ಲಿ, ಯೂತ್ ರೆಡ್ ಕ್ರಾಸ್ ಘಟಕದಿಂದ ವಿಶ್ವ ರೆಡ್ ಕ್ರಾಸ್  ದಿನಾಚರಣೆಯನ್ನು ಆಯೋಜಿಸಲಾಯಿತು. 
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಜಿ ಮಲ್ಲನಗೌಡ ಇವರು ವಹಿಸಿ ಮಾತನಾಡುತ್ತಾ ರೆಡ್ ಕ್ರಾಸ್  ಕೇವಲ ಒಂದು ಸಂಸ್ಥೆಯಲ್ಲ. ಅದು ಮಾನವೀಯತೆಯ ಸಂಕೇತ. ಯುದ್ದದ ಸಮಯದಲ್ಲಿ ಗಾಯಗೊಂಡ ಸೈನಿಕರಿಗೆ ನೆರವಾಗಲು ಆರಂಭವಾದ ಈ ಚಳುವಳಿ, ಇಂದು ಪ್ರಕೃತಿ ವಿಕೋಪ, ಅಪಘಾತ ಅಥವಾ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಜನರ ಜೀವ ಉಳಿಸುವ ಕೆಲಸ ಮಾಡುತ್ತಿದೆ, ಮತ್ತು  ವಿದ್ಯಾರ್ಥಿಗಳು ರೆಡ್ ಕ್ರಾಸ್ ಸ್ವಯಂ ಸೇವಕರಾಗಿ ಸೇವಾ ಮನೋಭಾವನೆಯನ್ನು ಬೆಳಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು. 
ಈ ಕಾರ್ಯಕ್ರಮದ ವೇದಿಕೆಯ ಮೇಲೆ ಡಾ ರಾಜಶ್ರೀ ಪಾಟೀಲ್ ಮುಖ್ಯಸ್ಥರು ಅರ್ಥಶಾಸ್ತ್ರ ವಿಭಾಗ, ರಾಧಸ್ವಾಮಿ, ಮುಖ್ಯಸ್ಥರು, ರಾಜ್ಯಶಾಸ್ರ್ತ ವಿಭಾಗ, ಡಾ.ಕವಿತ.ಎಂ.ಸಂಗನಗೌಡ, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. , ಡಾ.ಶರಣಬಸವ, ಮುಖ್ಯಸ್ಥರು, ಸಸ್ಯಶಾಸ್ರ್ತ ವಿಭಾಗ ಇವರು ಪ್ರ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು. ರೆಡ್ ಕ್ರಾಸ್ ಘಟಕದ ಸಂಚಾಲರಾದ ಡಾ.ಶರಣಗೌಡ ಇವರು ಅತಿಥಿಗಳನ್ನು ಸ್ವಾಗತಿಸಿದರು. ಡಾ.ವೈ.ಭ್ರಮರಾಂಭ, ಉಪನ್ಯಾಸಕರು ಕನ್ನಡ ವಿಭಾಗ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಅನುರಾಧ.ಕೆ, ಉಪನ್ಯಾಸಕರು ಜೈವಿಕ ತಂತ್ರಜ್ಞಾನ ವಿಭಾಗ ಇವರು ಕಾರ್ಯಕ್ರಮವನ್ನು ವಂದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST