ರಾಮದುರ್ಗ,ಜೂ,೨೨: ಸ್ಥಳೀಯ ಮಹರ್ಷಿ ಪತಂಜಲಿ ಯೋಗ ಪ್ರತಿಷ್ಠಾನ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಪ್ರತಿಷ್ಠಾನ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.
ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಜಂಟಿಯಾಗಿ ಉದ್ಘಾಟಿಸಿದರು.
ನಂತರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ಇಡೀ ವಿಶ್ವಕ್ಕೆ ಸಾರುವ ಮೂಲಕ ಜೂನ್ ೨೧ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಗುವಂತೆ ಮಾಡುವ ಮೂಲಕ ನಮ್ಮ ಭಾರತದ ಕಿರ್ತಿಯನ್ನು ಶಿಖರಕೆರುವಂತೆ ಮಾಡಿದ್ದಾರೆ. ಎಲ್ಲರೂ ಯೋಗಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.
ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಮಾತನಾಡಿ, ಯೋ ಮಾಡುವದರಿಂದ ಮನಷ್ಯನ ಹಲವಾರು ಕಾಯಿಲೆಗಳು ದೂರಾಗಲಿವೆ. ಆದ್ದರಿಂದ ಪ್ರತಿ ನಿತ್ಯ ಸ್ವಲ್ಪ ಸಮಯವನ್ನಾದರೂ ಯೋಗ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸಿ.ಬಿ. ಪಾಟೀಲ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶೇಷಪ್ಪ ಪೋತರಡ್ಡಿ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಆನಂದ ನಾಯಕ, ಬ್ರಹ್ಮಕುಮಾರಿ ಆಶ್ರಮದ ಮಾತೆ ಮಹಾದೇವಿ ಹಾಲಭಾವಿ, ಮಹರ್ಷಿ ಪತಂಜಲಿ ಯೋಗ ಪ್ರತಿಷ್ಠಾನದ ಬಿ.ಎಲ್. ಸಂಕನಗೌಡ್ರ, ವೆಂಕಟೇಶ ಹಿರೇರಡ್ಡಿ, ರಾಜೇಶ ಬೀಳಗಿ, ಯೋಗ ಶಿಕ್ಷಕ ರೇವಪ್ಪ ಕೊಟೂರ, ಚಂದ್ರು ಮಾಳದಕರ, ಪ್ರವೀಣ್ ಪತ್ತೆಪುರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹರ್ಷಿ ಪತಾಂಜಲಿ ಯೋಗ ಪ್ರತಿಷ್ಠಾನದ ಯೋಗ ಗುರು ಆರ್.ಎಸ್. ಕೋಟೂರ್ ಎಲ್ಲ ಯೋಗ ಶಿಬಿರಾರ್ಥಿಗಳಿಗೆ ಯೋಗದ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಮಹರ್ಷಿ ಪತಾಂಜಲಿ ಯೋಗ ಪ್ರತಿಷ್ಠಾನದಿಂದ ಅನೇಕರನ್ನು ಸತ್ಕರಿಸಿದರು. ಇದೇ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಅವರು ಯೋಗ ಗುರು ಆರ್.ಎಸ್. ಕೋಟೂರ್ ಹಾಗೂ ಯೋಗ ಪ್ರತಿಷ್ಠಾನದ ಪದಾಧಿಕಾರಿಗಳನ್ನು ಸತ್ಕರಿಸಿದರು. ಅಲ್ಲದೇ ವೇದಿಕೆಯ ಮೇಲಿದ್ದ ಎಲ್ಲ ಗಣ್ಯರು ಸಸಿಗಳನ್ನ ಹಂಚುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.