Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಂಗ್ ವರ್ಡ್ಸ್ ವಿಡಿಯೋ ಹಾಡು ಸಾರ್ವಜನಿಕರಿಗಾಗಿ...









       ಸರ್ಕಾರವು ಹೊರತರುತ್ತಿರುವ ಹೊಸ ಮಸೂದೆಯ ಕುರಿತು ಅರಿವು ಮೂಡಿಸುವ ’ರಾಂಗ್ ವರ್ಡ್ಸ್’ ವಿಡಿಯೋ ಆಲ್ಬಂ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

     ರ‍್ಯಾಡಿಕಲ್ ಕಾನ್ಸೆಪ್ಟ್ ಸ್ಟುಡಿಯೋ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಬೆಂಗಳೂರು ಮೂಲದ ಯುವ ಪ್ರತಿಭೆ  ನಹೇಶ್ ಪೂಲ್ ವೃತ್ತಿಯಲ್ಲಿ  ಆಟೋಮೊಬೈಲ್ ಇಂಜಿನಿಯರ್. ಪ್ರವೃತ್ತಿ ಫಿಲಂ ಮೇಕರ್.  ಇದರಿಂದಲೇ ಸದರಿ ಗೀತೆಗೆ ಸಾಹಿತ್ಯ, ಸಂಗೀತ, ನಿರ್ದೇಶನ ಜತೆಗೆ ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

     ಈ ಸಂದರ್ಭದಲ್ಲಿ ಮಾತನಾಡಿದ ನಹೇಶ್ ಪೂಲ್ "ಕಳೆದ ತಿಂಗಳು ’ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಅಥವಾ ಸಮುದಾಯದ ವಿರುದ್ದ ಯಾವುದೇ ವ್ಯಕ್ತಿ ಮಾತನಾಡಿದರೆ ಅಪರಾಧ ಎಂದು ಐವತ್ತು ಸಾವಿರ ದಂಡ, ಏಳು ವರ್ಷ ಜೈಲು ಶಿಕ್ಷೆ ಎಂಬುದರ ಬಗ್ಗೆ ಮಸೂದೆ ಹೊರಡಿಸಿದೆ. ಆದರೆ ಇಲ್ಲಿಯವರೆಗೂ ರಾಜ್ಯಪಾಲರಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಇಂತಹ ಮಸೂದೆ ಸಾರ್ವಜನಿಕರಿಗೆ ಮಾಹಿತಿ ತಿಳಿದಿರುವುದಿಲ್ಲ. ಅದಕ್ಕಾಗಿ ಹಾಡಿನ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ".

     "ನಾನು ತಪ್ಪಾದ ಪದಗಳನ್ನು ಬಳಸಲು ಸಾಧ್ಯವಿಲ್ಲ. ಅವುಗಳನ್ನು ಬಳಸಿದರೆ ನನ್ನನ್ನು ಬಂಧಿಸುತ್ತಾರೆ. ನನಗೆ ಬೇರೆ ಯಾವುದೇ ಪದಗಳಿಲ್ಲ. ಜತೆಗೆ ನಾವು ಜನರಿಗೆ ಮರಳಿ ಕೊಡುವಂತಹ ಒಂದು ಮಾದರಿ ರಸ್ತೆಯನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದೇವೆ. ವಿಧಾನಸೌದ ಮೆಟ್ಟಲುಗಳ ಬಳಿಯಿಂದ ಪ್ರತಿಯೊಂದು ಹಂತವನ್ನು ನೇರ ಪ್ರಸಾರವಾಗಿ ತೋರಿಸಿ, ಪಾರದರ್ಶಕತೆಯೊಂದಿಗೆ ರಸ್ತೆಯನ್ನು ನಿರ್ಮಿಸುವುದು ನನ್ನ ಗುರಿಯಾಗಿದೆ. ಇದನ್ನು  ನಿರ್ಮಿಸಲು ನನಗೆ ಸಹಾಯ ಮಾಡಿ ಎನ್ನುವಂತಹ ಅಂಶಗಳು ಇರಲಿದೆ. ವಿಧಾನಸೌದ ಮುಂಬಾಗ ಒಂದು ದಿನ ಚಿತ್ರೀಕರಣ ನಡೆಸಲಾಗಿದೆ" ಎಂದ ಅವರು  ಗಿಟಾರ್ ನುಡಿಸಿ ಮಾಧ್ಯಮ ಮಿತ್ರರನ್ನು ರಂಜಿಸಿದರು.

     ಕ್ರಿಯೇಟೀವ್ ಮುಖ್ಯಸ್ಥೆ ಅಕ್ಷರಸುರೇಶ್, ಛಾಯಾಗ್ರಹಣ-ಸಂಕಲನ ಸಾಗರ್ ಅವರದಾಗಿದೆ.































Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ