ಇಂಡಿ,ಜೂ,೨೨: ಸದೃಢ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗವು ಅತ್ಯವಶ್ಯಕ. ಯೋಗದಿಂದ ಅಸ್ತಮಾ, ಧಮ್ಮು, ಕೆಮ್ಮು ಅಲ್ಲದೇ ಅನೇಕ ರೋಗಗಳು ದೂರ ಮಾಡುವ ಶಕ್ತಿ ಇದೆ ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.
ಪಟ್ಟಣದ ಎ ಜಿ ಗಾಂಧಿ ಪ್ರೌಢ ಶಾಲೆಯಲ್ಲಿ ರವಿವಾರ ಹಮ್ಮಿಕೊಂಡ ೧೨ ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಯೋಗವು ದೇಹ, ಮನಸ್ಸು ಮತ್ತು ಉಸಿರಾಟವನ್ನು ಸಮತೋಲನಗೊಳಿಸುವ ಪ್ರಾಚೀನ ಭಾರತೀಯ ಕಲೆಯಾಗಿದ್ದು, ಅದು ವ್ಯಕ್ತಿಯ ಯೋಗಕ್ಷೇಮಕ್ಕೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಮುಖ್ಯೋಪಾಧ್ಯಾಯ ರಾಘವೇಂದ್ರ ಕುಲಕರ್ಣಿ ಮಾತನಾಡಿ, ಯೋಗದ ನಿರಂತರ ಅಭ್ಯಾಸವು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಲು ಮತ್ತು ಭಾವನೆಗಳನ್ನು ನಿಯಂತ್ರಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ, ಶಿಕ್ಷಕ ಸಿಬ್ಬಂದಿ ವರ್ಗದವರು, ಮಕ್ಕಳು ಹಾಜರಿದ್ದರು.
