Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಶಕ್ತಿ ಅಣುಶಕ್ತಿಗಿಂತ ಹಿರಿದು: ಈಶ್ವರ ಖಂಡ್ರೆ

ವೀರಶೈವ ಲಿಂಗಾಯತ ಜಾಗತಿಕ ಬ್ಯುಸೆನೆಸ್ ಕಾನ್ ಕ್ಲೇವ್: ಉದಯೋನ್ಮುಖ ಉದ್ಯಮಿಗಳಿಗೆ ಉತ್ತಮ ವೇದಿಕೆ 

ಬೆಂಗಳೂರು, ಜ.29: ಯುವಶಕ್ತಿ ಅಣುಶಕ್ತಿಗಿಂತ ಹಿರಿದಾಗಿದ್ದು, ಯುವಜನರಿಗೆ ಸೂಕ್ತ ಅವಕಾಶ ಕಲ್ಪಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದಿರುವ ವೀರಶೈವ ಲಿಂಗಾಯತ ಜಾಗತಿಕ ಬ್ಯುಸೆನೆಸ್ ಕಾನ್ ಕ್ಲೇವ್ ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಕಾನ್ ಕ್ಲೇವ್ ನಲ್ಲಿ ಉದಯೋನ್ಮುಖ ಉದ್ಯಮಿಗಳಿಗೆ ಉತ್ತಮ ವೇದಿಕೆ ಕಲ್ಪಿಸಿದೆ. 40 ಕೈಗಾರಿಕಾ ಮಳಿಗೆಗಳಿದ್ದು, ವಿಶೇಷ ವ್ಯಾಪಾರ ಕಾರ್ಯಾಗಾರವನ್ನೂ ಏರ್ಪಡಿಸಲಾಗಿದೆ. ಆ ಮೂಲಕ ಸಮುದಾಯದ ಯುವಜನರಿಗೆ ಉದ್ಯಮಶೀಲತೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ವೀರಶೈವ ಲಿಂಗಾಯತ ಸಮುದಾಯದಲ್ಲೂ ಬಡವರಿದ್ದು, ಪ್ರತಿಭಾವಂತರಿದ್ದರೂ ಅವರಿಗೆ ಅವಕಾಶ ಲಭಿಸುತ್ತಿಲ್ಲ. ಸಮಾಜದ ಉದ್ದಿಮೆದಾರರು ಪ್ರತಿಭಾವಂತರಿಗೆ ಮತ್ತು ಕಡುಬಡತನದಲ್ಲಿರುವ ಸಮಾಜದ ಬಡವರಿಗೂ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಕರೆ ನೀಡಿದರು.
ಆಧುನಿಕತೆ ಬೆಳೆದಂತೆಲ್ಲಾ ನಮ್ಮ ಯುವಕರು ದುಶ್ಚಟಗಳ ದಾಸರಾಗುತ್ತಿದ್ದಾರೆ. ಅಂತಹ ಯುವಜನರಿಗೆ ಮಾರ್ಗದರ್ಶನ ಮಾಡಿ ಅವರನ್ನು ಸನ್ಮಾರ್ಗದಲ್ಲಿ ನಡೆಸುವಂತೆ ಮಾಡಬೇಕು. ಆತ್ಮವಿಶ್ವಾಸ ಮೂಡಿಸಬೇಕು. ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದಾರೆ. ದುಡಿಯುವ ಕೈಗೆ ಉದ್ಯೋಗ ದೊರಕಿಸಬೇಕು ಎಂದರು.
ನಾವು ನಮ್ಮ ಹಿರಿಯರು ಸರ್ವೋತ್ತಮರು ಎಂದು ಹೇಳಿದರೆ ಸಾಲದು, ನಾವೂ ಉತ್ತಮರಾಗಿ ಬಾಳಬೇಕು. ಬಲವಿದ್ದವನು ಬಾಳುತ್ತಾನೆ ಎಂದು ಹೇಳುತ್ತಾರೆ. ನಾವು ನಮ್ಮ ಶಕ್ತಿಯನ್ನು ತೋರಿಸಬೇಕಾದರೆ ನಮ್ಮ ಸಮುದಾಯವನ್ನು ಆರ್ಥಿಕವಾಗಿ ಬಲಪಡಿಸುವುದರ ಜೊತೆಗೆ ಎಲ್ಲ ಸಮುದಾಯವನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗುವ ಮೂಲಕ ಸುಂದರ ಸಮಾಜ ನಿರ್ಮಾಣ ಮಾಡಬೇಕು ಎಂದು ಈಶ್ವರ ಖಂಡ್ರೆ
ಸಮಾರಂಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್, ವೀಣಾ ಕಾಶೆಪ್ಪನವರ್ ಮೊದಲಾದವರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ