Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಶಕ್ತಿ ಅಣುಶಕ್ತಿಗಿಂತ ಹಿರಿದು: ಈಶ್ವರ ಖಂಡ್ರೆ

ವೀರಶೈವ ಲಿಂಗಾಯತ ಜಾಗತಿಕ ಬ್ಯುಸೆನೆಸ್ ಕಾನ್ ಕ್ಲೇವ್: ಉದಯೋನ್ಮುಖ ಉದ್ಯಮಿಗಳಿಗೆ ಉತ್ತಮ ವೇದಿಕೆ 

ಬೆಂಗಳೂರು, ಜ.29: ಯುವಶಕ್ತಿ ಅಣುಶಕ್ತಿಗಿಂತ ಹಿರಿದಾಗಿದ್ದು, ಯುವಜನರಿಗೆ ಸೂಕ್ತ ಅವಕಾಶ ಕಲ್ಪಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದಿರುವ ವೀರಶೈವ ಲಿಂಗಾಯತ ಜಾಗತಿಕ ಬ್ಯುಸೆನೆಸ್ ಕಾನ್ ಕ್ಲೇವ್ ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಕಾನ್ ಕ್ಲೇವ್ ನಲ್ಲಿ ಉದಯೋನ್ಮುಖ ಉದ್ಯಮಿಗಳಿಗೆ ಉತ್ತಮ ವೇದಿಕೆ ಕಲ್ಪಿಸಿದೆ. 40 ಕೈಗಾರಿಕಾ ಮಳಿಗೆಗಳಿದ್ದು, ವಿಶೇಷ ವ್ಯಾಪಾರ ಕಾರ್ಯಾಗಾರವನ್ನೂ ಏರ್ಪಡಿಸಲಾಗಿದೆ. ಆ ಮೂಲಕ ಸಮುದಾಯದ ಯುವಜನರಿಗೆ ಉದ್ಯಮಶೀಲತೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ವೀರಶೈವ ಲಿಂಗಾಯತ ಸಮುದಾಯದಲ್ಲೂ ಬಡವರಿದ್ದು, ಪ್ರತಿಭಾವಂತರಿದ್ದರೂ ಅವರಿಗೆ ಅವಕಾಶ ಲಭಿಸುತ್ತಿಲ್ಲ. ಸಮಾಜದ ಉದ್ದಿಮೆದಾರರು ಪ್ರತಿಭಾವಂತರಿಗೆ ಮತ್ತು ಕಡುಬಡತನದಲ್ಲಿರುವ ಸಮಾಜದ ಬಡವರಿಗೂ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಕರೆ ನೀಡಿದರು.
ಆಧುನಿಕತೆ ಬೆಳೆದಂತೆಲ್ಲಾ ನಮ್ಮ ಯುವಕರು ದುಶ್ಚಟಗಳ ದಾಸರಾಗುತ್ತಿದ್ದಾರೆ. ಅಂತಹ ಯುವಜನರಿಗೆ ಮಾರ್ಗದರ್ಶನ ಮಾಡಿ ಅವರನ್ನು ಸನ್ಮಾರ್ಗದಲ್ಲಿ ನಡೆಸುವಂತೆ ಮಾಡಬೇಕು. ಆತ್ಮವಿಶ್ವಾಸ ಮೂಡಿಸಬೇಕು. ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದಾರೆ. ದುಡಿಯುವ ಕೈಗೆ ಉದ್ಯೋಗ ದೊರಕಿಸಬೇಕು ಎಂದರು.
ನಾವು ನಮ್ಮ ಹಿರಿಯರು ಸರ್ವೋತ್ತಮರು ಎಂದು ಹೇಳಿದರೆ ಸಾಲದು, ನಾವೂ ಉತ್ತಮರಾಗಿ ಬಾಳಬೇಕು. ಬಲವಿದ್ದವನು ಬಾಳುತ್ತಾನೆ ಎಂದು ಹೇಳುತ್ತಾರೆ. ನಾವು ನಮ್ಮ ಶಕ್ತಿಯನ್ನು ತೋರಿಸಬೇಕಾದರೆ ನಮ್ಮ ಸಮುದಾಯವನ್ನು ಆರ್ಥಿಕವಾಗಿ ಬಲಪಡಿಸುವುದರ ಜೊತೆಗೆ ಎಲ್ಲ ಸಮುದಾಯವನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗುವ ಮೂಲಕ ಸುಂದರ ಸಮಾಜ ನಿರ್ಮಾಣ ಮಾಡಬೇಕು ಎಂದು ಈಶ್ವರ ಖಂಡ್ರೆ
ಸಮಾರಂಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್, ವೀಣಾ ಕಾಶೆಪ್ಪನವರ್ ಮೊದಲಾದವರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ