LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Health & Fitness

ಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ನಶಾ ಮುಕ್ತ ಭಾರತ ಮಾಡಲು ಪ್ರತಿಯೊಬ್ಬ ಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. 

ಅವರು ಮೂಡಲಗಿ ಪಟ್ಟಣದ ಶ್ರೀ ಶ್ರೀಪಾದಭೋದ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಭಾರತ ಸರ್ಕಾರದ ಮೈ ಭಾರತ್ ಕೇಂದ್ರ ಬೆಳಗಾವಿ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ಶ್ರೀಪಾದಭೋದ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೂಡಲಗಿ ಏನ್ ಎಸ್ ಎಸ್ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ನಶಾ ಮುಕ್ತ ವಿಕಸಿತ ಭಾರತ ಕಾರ್ಯಕ್ರಮದ ವಿವಿಧ ಸ್ಪರ್ಧೆಯ ಸಮಾರಂಭ ಉದ್ಘಾಟಿಸಿ ಮಾತನಾಡಿ ಗುಟ್ಕಾ ಮಟಕಾದಂತ ಚಟಗಳಿಂದ ದೂರ ಇರಬೇಕು ಎಂದು ಯುವಕರಿಗೆ ಕರೆ ನೀಡಿದರು.

ಬೆಳಗಾವಿ ಮೈ ಭಾರತ ಕೇಂದ್ರದ ಬೆಳಗಾವಿ ಜಿಲ್ಲಾ ಯುವ ಅಧಿಕಾರಿ ಸಂಗ್ರಾಮ ಸಾವಂತ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮೈ ಭಾರತ ಕೇಂದ್ರದ ಮೂಲಕ ದೇಶದ ಯುವಜನರಿಗೆ ಹಲವಾರು ಯೋಜನೆಗಳು, ವಿವಿಧ ಜನಜಾಗೃತಿ  ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಇದರ ಸದುಪಯೋಗವನ್ನು ನಮ್ಮ ಭಾಗದ ಯುವ ಜನತೆ ಯುವಕ ಸಂಘಗಳ ಮೂಲಕ ನಿರಂತರ ಕಾರ್ಯ ಮಾಡಬೇಕು ಎಂದು  ಹೇಳಿದರು.

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ ನಮ್ಮ ಗ್ರಾಮೀಣ ಭಾಗದ ಯುವಕರು ಶ್ರದ್ದೆ ಭಕ್ತಿ ತಾಳ್ಮೆ ನಿಸ್ವಾರ್ಥದಿಂದ ಕಾರ್ಯ ಮಾಡಿದರೆ ನಮ್ಮ ದೇಶ ಪ್ರಗತಿಯತ್ತ ಸಾಗುತ್ತದೆ ಎಂದು ಹೇಳಿದರು. 

ಮೂಡಲಗಿಯ ಹಿರಿಯ ಸಾಹಿತಿಗಳಾದ ಬಾಲಶೇಖರ ಬಂದಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಹೇಶ ಕಂಬಾರ ಮಾತನಾಡಿ ಕಾಲೇಜಿನಲ್ಲಿ ಇಂತಹ ಒಳ್ಳೆಯ ಕಾರ್ಯಕ್ರಮವನ್ನು ಮಾಡಿದ ಬೆಳಗಾವಿ ಮೈ ಭಾರತ್ ಕೇಂದ್ರಕ್ಕೆ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಐಕ್ಯೂಎಸಿ ಸಂಯೋಜಕರಾದ ಚೇತನರಾಜ ಬಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಆರ್ ಐ ಆಸಂಗಿ, ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಸ ಗೊಡ್ಯಾಗೋಳ, ಗೋಪಾಲ ಗಡ್ಡೆಕಾರ, ಅಬ್ದುಲ್ ಮಿರ್ಜಾನಾಯಕ, ಮಲ್ಲಯ್ಯ ಕರಡಿ, ಆದರ್ಶ್ ಪೂಜೇರಿ, ಸರಸ್ವತಿ ರಬಕವಿ, ಸುಜಾತಾ ಪುಡ್ಲಕಟ್ಟಿ, ಮಲ್ಲಿಕಾರ್ಜುನ ಸಜ್ಜನವರ, ಸುರೇಶಬಾಬು ಮೋಹನಕುಮಾರ್, ಮಧುಸೂದನ, ಶಿವಾನಂದ ಹಿರೇಮಠ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೆಡಲ್ ಮತ್ತು ಪ್ರಮಾಣ ಪತ್ರಗಳನ್ನು ನೀಡಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಶಿವಕುಮಾರ್ ನಿರೂಪಿಸಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುಪಿಐ ಬಳಕೆದಾರರಿಗೆ ಹೊಸ ಶುಲ್ಕವಿಲ್ಲ: ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ಪ್ರಮುಖ ಹಣಕಾಸು ಮಸೂದೆಗಳಿಗೆ ಅಂಗೀಕಾರಬೆಳಗಾವಿಯ 'ಪ್ರಯತ್ನ' ಸಂಘಟನೆಯಿಂದ ಖಾನಾಪುರದ ಸರ್ಕಾರಿ ಪಿಯು ಕಾಲೇಜಿಗೆ 39 ಡೆಸ್ಕ್ ದೇಣಿಗೆಹುಬ್ಬಳ್ಳಿ ಧಾರವಾಡ 74 ಪಶ್ಚಿಮ ವಿಧಾನ ಸಭಾ ಮತ ಕ್ಷೇತ್ರದ ವತಿಯಿಂದ ಸಂಘಟನ್ ಸೃಜನ ಅಭಿಯಾನ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ : ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ  ಚಂದ್ರಶೇಖರ ನುಗ್ಲಿ  ಭರವಸೆರಾಜ್ಯದ ರೈತರಿಗೆ ಕೂಡಲೇ ಬರ ಪರಿಹಾರ ಘೋಷಿಸಿ: ಎನ್. ರವಿಕುಮಾರ್.ಕಿತ್ತೂರು ಗತವೈಭವಕ್ಕೆ ಹೊಸ ಸ್ಪರ್ಶ: ಪರಂಪರೆ ಸಂರಕ್ಷಣೆಗೆ ತಜ್ಞರ ಮಹತ್ವದ ಸಲಹೆಗಳುಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿಪ್ರೌಢಶಾಲಾ ಮಕ್ಕಳಿಗಾಗಿ ಹಾಸ್ಯ ಭಾಷಣ ಸ್ಪರ್ಧೆ ಸ್ಪರ್ಧೆಗಳು ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುತ್ತವೆ : ಡಾ. ಅರವಿಂದ ಕುಲಕರ್ಣಿವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಸತಿ ನಿಲಯಗಳು ಪೂರಕವಾಗಲಿವಚನಾನುಸಂಧಾನ ವ್ಯಕ್ತಿತ್ವವನ್ನು ರೂಪಿಸುತ್ತದೆ : ತೋಂಟದ ಶ್ರೀ