ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದರು: ನಿರಂಜನ ಹಿರೇಮಠ

Ravi Talawar
ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದರು: ನಿರಂಜನ ಹಿರೇಮಠ
WhatsApp Group Join Now
Telegram Group Join Now

ಹುಬ್ಬಳ್ಳಿ, ಮೇ 18: ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದರು ಎಂದು ಮೃತ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ ಹಿರೇಮಠ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ವಾರ್ಡ್​​ನಲ್ಲಿ ಎರಡು ಕೊಲೆಗಳು ಆಗಿವೆ. ಮೊದಲು ನನ್ನ ಮಗಳ ಕೊಲೆ  ನಡೆಯಿತು.

ಬಳಿಕ ಅಂಜಲಿ ಯುವತಿಯ ಕೊಲೆ ನಡೆಯಿತು. ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಜತೆಗೆ ರಕ್ಷಣೆ ಕೊಡಲು ಸರ್ಕಾರಕ್ಕೆ ಆಗಲಿಲ್ಲ. ನಮ್ಮ‌ ಜನಾಂಗಕ್ಕೆ ಜನರು ಬೆಲೆ‌ ಕೊಡುತ್ತಾರೆ. ಆದರೆ ಕೆಲವರು ರಾಜಕೀಯ ಮಾಡಿ ಈ ರೀತಿ ಮಾಡುತ್ತಿದ್ದಾರೆ. ಕಾಣದ ಕೈ ಕೆಲಸ ಮಾಡುತ್ತಿವೆ. ಜನರೆ ನನ್ನ ಕೈ ಹಿಡಿದಿದ್ದಾರೆ. ನನ್ನ ವಾರ್ಡ್​​ನಲ್ಲೇ ಅಕ್ರಮ ಚಟುವಟಿಕೆ ಮಾಡುತ್ತಿದ್ದಾರೆ. ಸರ್ಕಾರ ದಕ್ಷ ಪೊಲೀಸ ಅಧಿಕಾರಿ ನೇಮಿಸಬೇಕು. ಸರ್ಕಾರಕ್ಕೆ ಧಮ್ಮ ಇಲ್ಲ, ಅಂದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ವಾಗ್ದಾಳಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article