ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

Ravi Talawar
ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 17: ಹಳೇ ಮೈಸೂರು ಗೆಲ್ಲುವುದಕ್ಕೆ ಕಾಂಗ್ರೆಸ್​ ಈಗಾಗಲೇ ಒಂದು ಕಾರ್ಡ್​ ಪ್ಲೇ ಮಾಡಿದೆ. ಅದು ಒಕ್ಕಲಿಗ ಜಾತಿ ಕಾರ್ಡ್​. ಇದೇ ಒಕ್ಕಲಿಗ ಅಸ್ತ್ರವನ್ನ ಮತ್ತಷ್ಟು ಜೀವಂತವಾಗಿಡಲು ಕಾಂಗ್ರೆಸ್ ಮತ್ತೊಂದು​ ಪ್ಲ್ಯಾನ್ ಮಾಡಿಕೊಂಡಿದೆ.

ಮೋದಿ ಆಗಮನಕ್ಕೂ ಕೌಂಟರ್​ ಕೊಡಲು ನಾಳೆ (ಏಪ್ರಿಲ್ 17) ರಾಹುಲ್ ಗಾಂಧಿಯವರನ್ನಅಖಾಡಕ್ಕೆ ಇಳಿಸುತ್ತಿದ್ದಾರೆ. ಹೌದು.. ನಾಳೆ ಮಧ್ಯಾಹ್ನ 1.20ಕ್ಕೆ ರಾಹುಲ್​ ಗಾಂಧಿ   ಕೇರಳದಿಂದ ಬೆಂಗಳೂರಿನ ಹೆಚ್​ಎಎಲ್​​ಗೆ ಆಗಮಿಸಲಿದ್ದಾರೆ.

ಅಲ್ಲಿಂದ ಮಂಡ್ಯಕ್ಕೆತೆರಳಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 3.30ಕ್ಕೆ ಹೆಲಿಕಾಪ್ಟರ್​ ಮೂಲಕ ಕೋಲಾರಕ್ಕೆ  ತೆರಳಲಿದ್ದಾರೆ.. ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.

 

WhatsApp Group Join Now
Telegram Group Join Now
Share This Article