ಬಳ್ಳಾರಿ ನಗರದ ವಿವಿಧ ಸೌಲಭ್ಯಗಳಿಗಾಗಿ ಒಂದು ಲಕ್ಷ ಸಹಿ ಸಂಗ್ರಹ : ಬಿ ಎನ್ ಎಚ್ ಎಸ್ ಸೋಮಶೇಖರ್ 

Ravi Talawar
ಬಳ್ಳಾರಿ ನಗರದ ವಿವಿಧ ಸೌಲಭ್ಯಗಳಿಗಾಗಿ ಒಂದು ಲಕ್ಷ ಸಹಿ ಸಂಗ್ರಹ : ಬಿ ಎನ್ ಎಚ್ ಎಸ್ ಸೋಮಶೇಖರ್ 
WhatsApp Group Join Now
Telegram Group Join Now
 ಬಳ್ಳಾರಿ ಜೂನ್ 27 : ನಗರದಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಚರಂಡಿ ನೀರು ಮಿಶ್ರಣವಾಗುವುದನ್ನು ತಡೆಯುವುದು , ರಿಂಗ್ ರಸ್ತೆ ನಿರ್ಮಿಸುವುದು, ಮೋತಿ ಬ್ರಿಡ್ಜ್ ಅಗಲೀಕರಣ ಮಾಡುವುದು, ಸುಧಾ ಕ್ರಾಸ್ ಮೇಲ್ ಸೇತುವೆ ಪೂರ್ಣಗೊಳಿಸುವುದು  ಸೇರಿದಂತೆ ಇತರೆ ತುರ್ತು ಕೆಲಸಗಳನ್ನು ಕೈಗೊಳ್ಳದೆ ನಗರದಲ್ಲಿ ಎಲ್ಲಾ ಕಡೆ ವಿವಿಧ ಕಾಮಗಾರಿಗಳನ್ನು ಆರಂಭಿಸುತ್ತಿದ್ದಾರೆ ಒಂದು ಕಾಮಗಾರಿಯನ್ನು ಮುಗಿಸಿದ ಮೇಲೆ ಮತ್ತೊಂದನ್ನು ಕೈಗೊಳ್ಳುವುದು,  ಅವೈಜ್ಞಾನಿಕ ಮತ್ತು ಅನಾವಶ್ಯಕ ಕಾಮಗಾರಿಗಳನ್ನು ಆರಂಭಿಸುತ್ತಿದ್ದಾರೆ.  ಇದರಿಂದ ಬಳ್ಳಾರಿ ನಗರದ ಸಾರ್ವಜನಿಕರಿಗೆ ಬಹಳ ತೊಂದರೆ ಆಗುತ್ತದೆ, ನಗರದ ಮೂಲಭೂತ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಒದಗಿಸಿ ಕೊಡುವಂತೆ ಆಗ್ರಹಿಸಿ ಜೂನ್ 30 ರಿಂದ ಜುಲೈ 23 ವರೆಗೆ ನಗರದ ಕೌಲ್  ಬಜಾರ್, ಮೋತಿ ಸರ್ಕಲ್, ದುರ್ಗಮ್ಮ ಗುಡಿ, ರಾಯಲ್ ಸರ್ಕಲ್ ಸೇರಿದಂತೆ ಹಲವಾರು ಕಡೆಯಲ್ಲಿ ಒಂದು ಲಕ್ಷ ಸಹಿಯನ್ನು ಸಂಗ್ರಹಿಸುವ ಮೂಲಕ ಪ್ರತಿಭಟನೆಯನ್ನು ಬಳ್ಳಾರಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಸಂಚಾಲಕರಾದ ಸೋಮಶೇಖರ್ ತಿಳಿಸಿದರು.
 ಅವರ ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ನಗರದ ಮೂಲಭೂತ ಸೌಭಾಗ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಈಗಾಗಲೇ ನಾವು ಹೋರಾಟ ಸಮಿತಿಯಿಂದ ನಗರ ಪಾಲಿಕೆ  ಆಯುಕ್ತರು, ಜಿಲ್ಲಾಧಿಕಾರಿಗಳು ಸೇರಿದಂತೆ ಹಲವರಿಗೆ ಮನವಿಯನ್ನು ಮಾಡಿಕೊಂಡಿದ್ದೇವೆ ಆದರೆ ಇಲ್ಲಿಯವರೆಗೆ ಯಾರು ಕೂಡ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಿ ಕೊಡುವಲ್ಲಿ   ವಿಫಲರಾಗಿದ್ದಾರೆ.
 ಆದರಿಂದ ನಾವುಗಳು ದಿನಾಂಕ ಜುಲೈ 27ರಂದು ಬೃಹತ್ ಸಮಾವೇಶವನ್ನು ನಗರದಲ್ಲಿ ಸಂಘಟಿಸಲು   ನಿರ್ಧರಿಸಲಾಗಿದೆ, ಈ ಹೋರಾಟಕ್ಕೆ ಬಳ್ಳಾರಿಯ ನಾಗರಿಕರು ಎಲ್ಲ ರೀತಿಯಿಂದ ಬೆಂಬಲಿಸಿ ಯಶಸ್ವಿಗೊಳಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.
 ಈ ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಉಪನ್ಯಾಸಕರಾದ ಯು ನರಸಣ್ಣ, ಮುರ್ಚಾಜ್ ಸಾಬ್, ಡಾಕ್ಟರ್ ಪ್ರಮೋದ್, ಎಸ್ ಯು ಸಿ ಐ ನ ಗೋವಿಂದ,ವಿದ್ಯಾ ಸೇರಿದಂತೆ ಇತರ ಇದ್ದರು.
WhatsApp Group Join Now
Telegram Group Join Now
Share This Article