ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಜಾಮೀನ ರದ್ದು; ಪೊಲೀಸರಿಂದ ಬಂಧನ

Ravi Talawar
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಜಾಮೀನ ರದ್ದು; ಪೊಲೀಸರಿಂದ ಬಂಧನ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 14: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್​ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್​ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು.ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆಯಲಿದ್ದಾರೆ. ಗೆಲವು ನಿಧಾನ ಆಗಬಹುದು ದೇವರ ರಕ್ಷಣೆ ಇದ್ದೇ ಇರುತ್ತೆ ಎಂದು ಪವಿತ್ರಾ ಗೌಡ ಪೋಸ್ಟ್​ ಮಾಡಿದ್ದರು. ನಾನು ತಾಳ್ಮೆ ಹಾಗೂ ನಂಬಿಕೆಯನ್ನು ಆಯ್ಕೆ ಮಾಡಿಕೊಳ್ತಿನಿ ಎಂದು ಪವಿತ್ರಾ ಹೇಳಿದ್ದಾರೆ.

ಹೈಕೋರ್ಟ್ ಆದೇಶ ವಿಕೃತತೆಯಿಂದ ಕೂಡಿದೆ, ಹೈಕೋರ್ಟ್ ಆದೇಶ ಅಧಿಕಾರದ ಯಾಂತ್ರಿಕ ಪ್ರಯೋಗವನ್ನ ಪ್ರತಿಬಿಂಬಿಸುತ್ತದೆ.ಜಾಮೀನು ಮಂಜೂರು ಮಾಡುವುದರಿಂದ ವಿಚಾರಣೆಯ ಮೇಲೆ ಪರಿಣಾಮ ಬೀರಲಿದೆ.ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ.

WhatsApp Group Join Now
Telegram Group Join Now
Share This Article