ಜೂ.18 ರಂದು ಅಂಚೆ ಇಲಾಖೆಯ ನಿವೃತ್ತ ಪಿಂಚಣಿದಾರರಿಗಾಗಿ – ಪಿಂಚಣಿ ಅದಾಲತ್

Ravi Talawar
ಜೂ.18 ರಂದು ಅಂಚೆ ಇಲಾಖೆಯ ನಿವೃತ್ತ ಪಿಂಚಣಿದಾರರಿಗಾಗಿ – ಪಿಂಚಣಿ ಅದಾಲತ್
WhatsApp Group Join Now
Telegram Group Join Now

ಬಳ್ಳಾರಿ,ಜೂ.14 ಅಂಚೆ ಇಲಾಖೆಯಿಂದ ನಿವೃತ್ತರಾದ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖಾ ನೌಕರರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಜೂ.18 ರಂದು  ಸಂಜೆ 4ಕ್ಕೆ ಬಳ್ಳಾರಿ ವಿಭಾಗೀಯ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.

ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದರೆ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ವಿಭಾಗೀಯ ಕಾರ್ಯಾಲಯ ಕೋಟೆ, ಬಳ್ಳಾರಿ, ಅವರಿಗೆ ಜೂ.18  ರ ಮುಂಚಿತವಾಗಿ ತಲುಪುವಂತೆ ಪತ್ರ ಮುಖೇನ ಅಥವಾ [email protected] ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು ಅಥವಾ ತಮ್ಮ ಅಹವಾಲುನೊಂದಿಗೆ ಜೂ.18 ರಂದು ನಡೆಯುವ ಪಿಂಚಣಿ ಅದಾಲತ್‍ನಲ್ಲಿ ಭಾಗವಹಿಸಬಹುದು. ಅದಾಲತ್‍ನಲ್ಲಿ ಭಾಗವಹಿಸುವವರಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article