ಮಂಗಳೂರು: ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಎಐ ವಿಡಿಯೋ ಮಾಡಿ ಸುಳ್ಳು ಸುದ್ದಿಗಳನ್ನು ಹರಡಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ಗೆ ಮತ್ತೆ ಸಂಕಷ್ಟ ಶುರುವಾಗಿದೆ. ಬೆಳ್ತಂಗಡಿ ಪೊಲೀಸರು ಮತ್ತೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಸಮೀಪದ ಹುಲ್ಲಹಳ್ಳಿ ರಾಯಲ್ ರೆಸಿಡೆನ್ಸಿ ಬಡಾವಣೆಯಲ್ಲಿರುವ ಯೂಟ್ಯೂಬರ್ ಸಮೀರ್ನ ಬಾಡಿಗೆ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಸಮೀರ್ ಮನೆಗೆ ಪೊಲೀಸರು ಈ ಬಾರೀ ಸರ್ಚ್ ವಾರಂಟ್ನೊಂದಿಗೆ ಎಂಟ್ರಿ ಕೊಟ್ಟು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಕೋರ್ಟ್ನಿಂದ ಒಂದು ದಿನದ ಹಿಂದೆ ಸರ್ಚ್ ವಾರಂಟ್ ಪಡೆದುಕೊಂಡ ಪೊಲೀಸರು, ಸಮೀರ್ನ ಮನೆಗೆ ತೆರಳಿ ತನಿಖೆ ಕೈಗೊಂಡಿದ್ದಾರೆ.