ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ: ಮುಖ್ಯಮಂತ್ರಿ ಸಿದ್ದರಾಮಯ್ಯ

Ravi Talawar
ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ: ಮುಖ್ಯಮಂತ್ರಿ ಸಿದ್ದರಾಮಯ್ಯ
WhatsApp Group Join Now
Telegram Group Join Now

ಮೈಸೂರು,25: ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್.ಡಿ. ದೇವೇಗೌಡ, ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಟೀಕಿಸಿದರು.

ಲೈಂಗಿಕ ಹಗರಣದ ಆರೋಪಿಯಾಗಿರುವ ಪ್ರಜ್ವಲ್ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಭಾರತಕ್ಕೆ ವಾಪಸಾಗಿ ಪೊಲೀಸರಿಗೆ ಶರಣಾಗುವಂತೆ ದೇವೇಗೌಡ ಅವರು ತಮ್ಮಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಪತ್ರ ಬರೆದಿದ್ದಾರೆ.

ಈ ಪತ್ರ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನನ್ನ ಪ್ರಕಾರ ಹಾಸನದ ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿರುವುದೇ ದೇವೇಗೌಡರು. ಸಾರ್ವಜನಿಕವಾಗಿ ಅನುಕಂಪಗಳಿಸಲು ಪತ್ರ ಬರೆದಿದ್ದಾರೆ. ವಿದೇಶಕ್ಕೆ ಕಳುಹಿಸಿರುವುದು ಅವರೇ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಣವರ ಅಣ್ಣನ ಮಗ ಅತ್ಯಾಚಾರ, ಲೈಂಗಿಕ ದೌರ್ಜನ್ಯವನ್ನೆಲ್ಲಾ ಮಾಡಿದ್ದಾನೆ. ಯಾರು ಅತ್ಯಾಚಾರ ಮಾಡಿದ್ದಾರೆಯೋ ಅದು ದೊಡ್ಡ ಅಪರಾಧ. ಈ ಗಂಭೀರ ವಿಚಾರದಿಂದ ಗಮನವನ್ನು ಬೇರೆಡೆ ಸೆಳೆಯಲು ಕುಮಾರಸ್ವಾಮಿ ಏನೇನೋ ಹೇಳುತ್ತಿದ್ದಾರೆ. ಶಿವಕುಮಾರ್‌ ಮತ್ತಿತರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

WhatsApp Group Join Now
Telegram Group Join Now
Share This Article