ವಯನಾಡ್ ಭೇಟಿಗೂ ಮುನ್ನ ಬೆಂಗಳೂರಿಗೆ ರಾಹುಲ್, ಪ್ರಿಯಾಂಕಾ

Ravi Talawar
ವಯನಾಡ್ ಭೇಟಿಗೂ ಮುನ್ನ ಬೆಂಗಳೂರಿಗೆ ರಾಹುಲ್, ಪ್ರಿಯಾಂಕಾ
WhatsApp Group Join Now
Telegram Group Join Now

ಬೆಂಗಳೂರು, ಜೂನ್ 11: ಕಾಂಗ್ರೆಸ್  ಸಂಸದ ರಾಹುಲ್ ಗಾಂಧಿ  ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾತ್ರಿ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ರಾಹುಲ್​​, ಪ್ರಿಯಾಂಕಾರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್​ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಉಭಯ ನಾಯಕರು ನಾಳೆ ಬೆಳಗ್ಗೆ ಕೇರಳದ ವಯನಾಡ್​​ಗೆ ತೆರಳಲಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ರಾಹುಲ್ ಹಾಗೂ ಪ್ರಿಯಾಂಕಾ ಕೇರಳದ ಮಲಪ್ಪುರಂ ಜಿಲ್ಲೆ ಹಾಗೂ ಕಲ್ಪಟ್ಟಾದಲ್ಲಿ ಬುಧವಾರ ಮತದಾರರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ವಯನಾಡ್ ತೊರೆದು ರಾಯ್​ಬರೇಲಿ ಉಳಿಸಿಕೊಂಡರೆ ಅವರ ಸ್ಥಾನಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ರಾಯಬರೇಲಿಯನ್ನು ಉಳಿಸಿಕೊಂಡು ಹಾಲಿ ಕ್ಷೇತ್ರವಾದ ವಯನಾಡನ್ನು ಹೊರಗಿಡುವ ಬಗ್ಗೆ ರಾಹುಲ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
Share This Article