ಕರಾವಳಿಯಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ : ರೆಡ್ ಅಲರ್ಟ್

Ravi Talawar
ಕರಾವಳಿಯಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ : ರೆಡ್ ಅಲರ್ಟ್
WhatsApp Group Join Now
Telegram Group Join Now

ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕಾರ್ಕಳ, ಅಂಕೋಲಾ, ಕ್ಯಾಸಲ್​ರಾಕ್, ಸಿದ್ದಾಪುರ, ಆಗುಂಬೆ, ಮುಲ್ಕಿ, ಕದ್ರಾ, ಧರ್ಮಸ್ಥಳ, ಬೆಳ್ತಂಗಡಿ, ಕುಂದಾಪುರ, ಗೋಕರ್ಣ, ಕುಮಟಾ, ಶಿರಾಲಿ, ಗೇರುಸೊಪ್ಪ, ಮಂಕಿ, ಕಾರವಾರ, ಉಪ್ಪಿನಂಗಡಿ, ಪುತ್ತೂರು, ಮಂಗಳೂರು, ಮಾಣಿ, ಕೋಟ, ಉಡುಪಿ, ಸುಳ್ಯ, ಲೋಂಡಾ, ಶೃಂಗೇರಿ, ಸಿದ್ದಾಪುರ, ಲಿಂಗನಮಕ್ಕಿ, ಕಳಸದಲ್ಲಿ ಭಾರಿ ಮಳೆಯಾಗಿದೆ.

WhatsApp Group Join Now
Telegram Group Join Now
Share This Article