ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ

Ravi Talawar
ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ
WhatsApp Group Join Now
Telegram Group Join Now

ಬೆಂಗಳೂರು, ಜೂನ್ 05: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ ತಿಂಗಳ ಅಂತ್ಯದಲ್ಲಿ ರಾಜ್ಯಾದ ಕೆಲವೆಡೆ ಮಳೆ ಅಬ್ಬರಿಸಿತ್ತು, ಹಾನಿಗಳೂ ಉಂಟಾಗಿತ್ತು. ಈಗ ಕಳೆದ ಎರಡು ಮುರು ದಿನಗಳಿಂದ ಕೊಂಚ ಬಿಡುವು ಪಡೆದಿತ್ತು. ಇದೀಗ ಮತ್ತೆ ಮಳೆ ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ದೊರೆತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

ಎಚ್​​ಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Group Join Now
Telegram Group Join Now
Share This Article