ರಾಮುಲುಗೆ ಶಾ ಭೇಟಿಗೆ ಸಿಗದ ಅವಕಾಶ; ರೆಡ್ಡಿ ಶಾ ಗುಪ್ತಗುಪ್ತ ಮೀಟಿಂಗ್‌!

Ravi Talawar
ರಾಮುಲುಗೆ ಶಾ ಭೇಟಿಗೆ ಸಿಗದ ಅವಕಾಶ; ರೆಡ್ಡಿ ಶಾ ಗುಪ್ತಗುಪ್ತ ಮೀಟಿಂಗ್‌!
WhatsApp Group Join Now
Telegram Group Join Now

ಬಳ್ಳಾರಿಯ ಬಿಜೆಪಿ ನಾಯಕ ಶ್ರೀರಾಮುಲು ಅವರು ಬೆಂಗಳೂರಿಗೆ ಬಂದ ಅಮಿತ್ ಶಾ ಅವರನ್ನು ಭೇಟಿಯಾಗಲು ಬಯಸಿದ್ದರು. ಆದರೆ ಅವಕಾಶ ಸಿಗಲಿಲ್ಲ. ಆದರೆ, ಮತ್ತೊಂದೆಡೆ ಅಮಿತ್ ಶಾ ಅವರನ್ನು ಜನಾರ್ದನ ರೆಡ್ಡಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ಬಳ್ಳಾರಿಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ರಾಮುಲು ಹೈಕಮಾಂಡ್‌ನೊಂದಿಗೆ ತಮ್ಮ ಅಸಮಾಧಾನವನ್ನು ಹಂಚಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಅವರ ಪ್ರಯತ್ನ ವಿಫಲವಾಗಿದೆ.  ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡ ಬಳಿಕ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಅಳಲು ತೋಡಿಕೊಳ್ಳಲು ಶ್ರೀರಾಮುಲು ಮುಂದಾಗಿದ್ದರು. ಒಂದು ಬಾರಿ ಅವರನ್ನು ದೆಹಲಿಗೆ ಬರುವಂತೆ ಹೇಳಿದ್ದ ಹೈಕಮಾಂಡ್ ನಾಯಕರು, ನಂತರ ಸದ್ಯಕ್ಕೆ ಬರುವುದು ಬೇಡ ಎಂಬ ಸಂದೇಶ ಕಳುಹಿಸಿದ್ದರು. ಇದರಿಂದಾಗಿ ಹೈಕಮಾಂಡ್ ಮುಂದೆ ಅಸಮಾಧಾನ ಹೇಳಿಕೊಳ್ಳುವ ರಾಮುಲು ಪ್ರಯತ್ನಕ್ಕೆ ತಡೆಯಾಗಿತ್ತು.

ಇದೀಗ ಅಮಿತ್ ಶಾ ಬೆಂಗಳೂರಿಗೆ ಬರುವುದನ್ನೇ ರಾಮಲು ಎದುರು ನೋಡುತ್ತಿದ್ದರು. ಶಾ ಅವರೊಂದಿಗಿನ ತಮ್ಮ ಹಳೆಯ ಸ್ನೇಹವನ್ನು ಬಳಸಿಕೊಂಡು, ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಉತ್ಸಾಹದಿಂದ ಇದ್ದರು. ಆದರೆ ರಾಮುಲುಗೆ ಜನಾರ್ದನ ರೆಡ್ಡಿ ಟಕ್ಕರ್ ಕೊಟ್ಟಿದ್ದಾರೆ.

WhatsApp Group Join Now
Telegram Group Join Now
Share This Article