ಸಂಡೂರು: ಬಿಜೆಪಿ ಸಂಘಟನೆ ಬಲವರ್ಧನೆಗೆ ಒತ್ತಾಯ

MK HasiruKranti
ಸಂಡೂರು: ಬಿಜೆಪಿ ಸಂಘಟನೆ ಬಲವರ್ಧನೆಗೆ ಒತ್ತಾಯ
WhatsApp Group Join Now
Telegram Group Join Now

 

ಸಂಡೂರು23..: ಭಾರತೀಯ ಜನತಾ ಪಾರ್ಟಿಯ ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳಿಗೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು, ಪ್ರಧಾನ ಕಾರ್ಯಸಂಡೂರು: ಬಿಜೆಪಿ ಸಂಘಟನೆ ಬಲವರ್ಧನೆಗೆ ಒತ್ತಾಯ

ಸಂಡೂರು23..: ಭಾರತೀಯ ಜನತಾ ಪಾರ್ಟಿಯ ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳಿಗೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಮತ್ತು ಸಹ ಪ್ರಮುಖರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ರಾಜ್ಯ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪದಾಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷದ ತತ್ವಗಳು ಮತ್ತು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಂಘಟಿತ ಕಾರ್ಯಪದ್ಧತಿ ಮತ್ತು ತಂಡಭಾವನೆ ಮೂಲಕ ಪಕ್ಷವನ್ನು ಇನ್ನಷ್ಟು ವಿಸ್ತರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಉಡೇದ ಸುರೇಶ, ಮಂಡಲ ಅಧ್ಯಕ್ಷರಾದ ಅಶೋಕ ಕುಮಾರ್, ಉಪಾಧ್ಯಕ್ಷರಾದ ನರೇಂದ್ರ ಪಾಟೀಲ್, ಚಂದ್ರಪ್ಪ, ವಸಂತ ಕುಮಾರ್, ವಗ್ಗರಣೆ ರಮೇಶ್, ಪ್ರಧಾನ ಕಾರ್ಯದರ್ಶಿ ನರಸಿಂಗ ಎನ್.ಟಿ.ಆರ್., ಕಚೇರಿ ಕಾರ್ಯದರ್ಶಿ ಎನ್. ರಮೇಶ್, ಸೋಶಿಯಲ್ ಮೀಡಿಯಾ ಸಂಚಾಲಕರಾದ ಹುಲಿರಾಜ್ ಬೊಮ್ಮಘಟ್ಟ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸಹ ಪ್ರಮುಖರು, ಮಂಡಲ ಪದಾಧಿಕಾರಿಗಳು, ಪುರಸಭೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.ದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಮತ್ತು ಸಹ ಪ್ರಮುಖರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ರಾಜ್ಯ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪದಾಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷದ ತತ್ವಗಳು ಮತ್ತು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಂಘಟಿತ ಕಾರ್ಯಪದ್ಧತಿ ಮತ್ತು ತಂಡಭಾವನೆ ಮೂಲಕ ಪಕ್ಷವನ್ನು ಇನ್ನಷ್ಟು ವಿಸ್ತರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಉಡೇದ ಸುರೇಶ, ಮಂಡಲ ಅಧ್ಯಕ್ಷರಾದ ಅಶೋಕ ಕುಮಾರ್, ಉಪಾಧ್ಯಕ್ಷರಾದ ನರೇಂದ್ರ ಪಾಟೀಲ್, ಚಂದ್ರಪ್ಪ, ವಸಂತ ಕುಮಾರ್, ವಗ್ಗರಣೆ ರಮೇಶ್, ಪ್ರಧಾನ ಕಾರ್ಯದರ್ಶಿ ನರಸಿಂಗ ಎನ್.ಟಿ.ಆರ್., ಕಚೇರಿ ಕಾರ್ಯದರ್ಶಿ ಎನ್. ರಮೇಶ್, ಸೋಶಿಯಲ್ ಮೀಡಿಯಾ ಸಂಚಾಲಕರಾದ ಹುಲಿರಾಜ್ ಬೊಮ್ಮಘಟ್ಟ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸಹ ಪ್ರಮುಖರು, ಮಂಡಲ ಪದಾಧಿಕಾರಿಗಳು, ಪುರಸಭೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article