ಅಶೋಕ್ ಕಡಬ ಅವರು ನಿರ್ದೇಶಿಸಿ ಮಹಾಂತೇಶ್ ವಿ ಕೆ ಅವರ ನಿರ್ಮಾಣದ  ‘ಸತ್ಯಂ’ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ.  ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರದ ಕಾನ್ಸೆಪ್ಟ್ ಬಗ್ಗೆ  ಮೆಚ್ಚುಗೆ  ವ್ಯಕ್ತಪಡಿಸಿ ಚಿತ್ರಕ್ಕೆ  ಯು/ಎ ಸರ್ಟಿಫಿಕೇಟ್ ನೀಡಿದೆ. ಯಾವುದೇ ಕಟ್, ಮ್ಯೂಟ್ ಇಲ್ಲದೆ ಈ ಚಿತ್ರ ಸೆನ್ಸಾರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದೆ.
ಕೆಂಪ, ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ  ಈ  ಚಿತ್ರದಲ್ಲಿ  ಕನ್ನಡತಿ  ಖ್ಯಾತಿಯ ರಂಜನಿ ರಾಘವನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸತ್ಯಂ ಮಾಸ್ ಚಿತ್ರವಾದರೂ ತುಳುನಾಡಿನ ದೈವಾರಾಧನೆಯ ಬಗ್ಗೆ  ಒಂದು ಎಳೆ ಈ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ. ಕಾಂತಾರ ಚಿತ್ರಕ್ಕೂ ಮುನ್ನವೇ ಸತ್ಯಂ ಕಥೆಯನ್ನು ರೆಡಿ ಮಾಡಿಕೊಂಡಿದ್ದಾಗಿ ನಿರ್ದೇಶಕರೇ ಹೇಳಿದ್ದಾರೆ.
ಶ್ರೀ ಮಾತಾ ಕ್ರಿಯೇಷನ್ಸ್  ಬ್ಯಾನರಿನಡಿ ನಿರ್ಮಾಣವಾಗಿರುವ  ‘ಸತ್ಯಂ’  ಚಿತ್ರ ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳ ಚಿತ್ರವೆಂದು ನಿರ್ದೇಶಕ ಹೇಳಿದ್ದಾರೆ. ಶೀಘ್ರದಲ್ಲೇ ಚಿತ್ರದ ಟ್ರೈಲರ್  ಬಿಡುಗಡೆಯಾಗಲಿದೆ,  ರವಿ ಬಸ್ರೂರು  ಸಂಗೀತ ನಿರ್ದೇಶನ,  ಸಿನೆಟೆಕ್ ಸೂರಿ  ಛಾಯಾಗ್ರಹಣ, ತೆಲುಗು ನಟ ಸುಮನ್, ಸೈಯಾಜಿ ಶಿಂಧೆ, ಪವಿತ್ರಾ ಲೋಕೇಶ್, ಅವಿನಾಶ್,  ವಿನಯಾ ಪ್ರಸಾದ್, ಮುಖ್ಯಮಂತ್ರಿ ಚಂದ್ರು, ಎಂ ಎನ್ ಲಕ್ಷ್ಮಿದೇವಿ, ಶೃಂಗೇರಿ ರಾಮಣ್ಣ, ತನುಶ್ರೀ, ಎಂ.ಎಸ್. ಉಮೇಶ್, ಬಸವರಾಜ್ ಕಟ್ಟಿ, ಮೀನಾಕ್ಷಿ ಮುಂತಾದವರ ತಾರಾಗಣವಿದೆ.

 
		 
		 
		
