ಬಳ್ಳಾರಿ,ಜೂ.05 ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ ದಾಸ್ ರವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯದ ವಿಶೇಷ ಶಿಬಿರ(ಬೂತ್ ಮಟ್ಟದ) ಅವಧಿಯು ಜೂ.08 ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆAದು ತಿಳಿಸಿ ಸಮೀಕ್ಷಾ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘ-ಸAಸ್ಥೆಗಳ ಮುಖಂಡರುಗಳು ಕೋರಿರುವ ಹಿನ್ನಲೆಯಲ್ಲಿ ಪರಿಶಿಷ್ಟ ಜಾತಿಯ ವರ್ಗದವರು ವಿಶೇಷ ಶಿಬಿರಗಳಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಬೇಕು.
ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಪ್ರಕ್ರಿಯೆಯು ಜೂ.08 ರವರೆಗೆ ಮುಂದುವರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ: ಜೂ.08 ರ ವರೆಗೆ ವಿಶೇಷ ಶಿಬಿರ ಅವಧಿ ವಿಸ್ತರಣೆ
