ಬಾತ್​ರೂಂನಲ್ಲಿ ಜಾರಿ ಬಿದ್ದು ಪ್ರಜ್ಞೆ ಕಳೆದುಕೊಂಡ ಟಿಎಂಸಿ ಹಿರಿಯ ನಾಯಕ ಮುಕುಲ್ ರಾಯ್

Ravi Talawar
ಬಾತ್​ರೂಂನಲ್ಲಿ ಜಾರಿ ಬಿದ್ದು ಪ್ರಜ್ಞೆ ಕಳೆದುಕೊಂಡ ಟಿಎಂಸಿ ಹಿರಿಯ ನಾಯಕ ಮುಕುಲ್ ರಾಯ್
WhatsApp Group Join Now
Telegram Group Join Now

ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮುಕುಲ್ ರಾಯ್ ತಮ್ಮ ಮನೆಯ ಬಾತ್​ರೂಂನಲ್ಲಿ ಜಾರಿ ಬಿದ್ದ ಪರಿಣಾಮ ಪ್ರಜ್ಞೆ ಕಳೆದುಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರ ಪುತ್ರ ಸುಭ್ರಾಂಗು ರಾಯ್ ಈ ಕುರಿತು ಮಾಹಿತಿ ನೀಡಿದ್ದಾರೆ, ಬುಧವಾರ ಸಂಜೆ ಬಾತ್ ರೂಂನಲ್ಲಿ ಜಾರಿ ಬಿದ್ದು ಮುಕುಲ್ ರಾಯ್ ಅವರ ತಲೆಗೆ ಗಾಯವಾಗಿತ್ತು. ಆರೋಗ್ಯ ಸ್ಥಿರವಾಗಿದೆ ಅವರ ಮೇಲ್ವಿಚಾರಣೆಗೆ ವೈದ್ಯರ ತಂಡವನ್ನು ರಚಿಸಲಾಗಿದೆ ಎಂದು ಹೇಳಿದರು.

ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 70 ವರ್ಷದ ನಾಯಕ ಪ್ರಜ್ಞೆ ತಪ್ಪುವ ಮುನ್ನ ವಾಂತಿ ಕೂಡ ಮಾಡಿಕೊಂಡಿದ್ದರು. ಅವರು ಅಲ್ಝೈಮರ್ ಕಾಯಿಲೆಯಿಂದ ಬಳಲುತ್ತಿದ್ದು, ತೃಣಮೂಲ ಕಾಂಗ್ರೆಸ್‌ನ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಅವರು 2017 ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಗೆದ್ದಿದ್ದರು. ಆದರೆ ನಂತರ ಅವರು ತೃಣಮೂಲ ಕಾಂಗ್ರೆಸ್‌ಗೆ ಮರಳಿದರು.

ಅವರಿಗೆ ಏನಾಗಿದೆ ಎಂಬುದು ವರದಿ ಬಂದ ಬಳಿಕ ತಿಳಿಯುತ್ತದೆ ಅದಾದ ಬಳಿಕ ಮುಂದಿನ ಚಿಕಿತ್ಸೆ ಬಗ್ಗೆ ವೈದ್ಯರು ಹೇಳಬಹುದು ಎಂದು ಪುತ್ರ ಹೇಳಿದ್ದಾರೆ. ಇದಕ್ಕೂ ಮುನ್ನ ಕಳೆದ ಏಪ್ರಿಲ್ ನಲ್ಲೂ ಮುಕುಲ್ ರೈ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಬೇಕಾಯಿತು.

WhatsApp Group Join Now
Telegram Group Join Now
Share This Article