ಬಡವರ ನಿವೇಶನ ಕಸಿದುಕೊಂಡ ಸಿದ್ದರಾಮಯ್ಯ: ಹರಿಹಾಯ್ದ ಬಿಜೆಪಿ ಶಾಸಕ ಬಿ.ಪಿ.ಹರೀಶ್

Ravi Talawar
ಬಡವರ ನಿವೇಶನ ಕಸಿದುಕೊಂಡ ಸಿದ್ದರಾಮಯ್ಯ:  ಹರಿಹಾಯ್ದ ಬಿಜೆಪಿ ಶಾಸಕ ಬಿ.ಪಿ.ಹರೀಶ್
WhatsApp Group Join Now
Telegram Group Join Now

ದಾವಣಗೆರೆ(ಜು.12):  ಬಡವರಿಗೆ ಸಿಗಬೇಕಾದ ನಿವೇಶನಗಳನ್ನ ಸಿಎಂ ಸಿದ್ದರಾಮಯ್ಯ ಅವರು ಕಸಿದುಕೊಂಡಿದ್ದಾರೆ. ಕೂಡಲೇ ಸಿಎಂ ರಾಜೀನಾಮೆ ಕೂಡಬೇಕು. ಪ್ರತಿಭಟನೆ ಮಾಡಲು ಹೋದ ನಮ್ಮ ನಾಯಕರನ್ನು ಬಂಧಿಸಿದ್ದಾರೆ ಎಂದು ರಾಜ್ಯ ಸರ್ಕಾರದ  ವಿರುದ್ಧ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಹರಿಹಾಯ್ದಿದ್ದಾರೆ.

ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಪಿ.ಹರೀಶ್ ಅವರು, ನಾನು ಹಿಂದುಳಿದ ವರ್ಗಕ್ಕೆ ಸೇರಿದ್ದು ಹಾಗಾಗಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಜಾತಿಯ ಅಸ್ತ್ರ ಬೆಳೆಸಿದ್ದು ಅವರ ಶಕ್ತಿ ಕುಂದಿದೆ ಎಂಬುದು ತೋರಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಎಸ್ಟಿ‌ ನಿಗಮದ ಹಣ ವೈಯಕ್ತಿಕ ಖಾತೆಗೆ ಹೋಗುತ್ತದೆ ಎಂದರೆ ಸಿಎಂ ಆರ್ಥಿಕ ಇಲಾಖೆಯ ಜವಾಬ್ದಾರಿ ಹೊಂದಿದ್ದಾರೆ. ಹೀಗಾಗಿ ಈ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನನಗೌಡ ದದ್ದಲ್ ಅವರನ್ನು ಏಕೆ ಬಂಧಿಸಿಲ್ಲಾ? ಎಂದು ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
Share This Article