ಮದ್ದೂರಿನ ಕೋಮು ಹಿಂಸಾಚಾರದ ಬಗ್ಗೆ ಸಿದ್ದರಾಮಯ್ಯ ರಾಜ್ಯಕ್ಕೆ ಕ್ಷಮೆಕೋರಬೇಕು: ಆರ್‌.ಅಶೋಕ

Ravi Talawar
ಮದ್ದೂರಿನ ಕೋಮು ಹಿಂಸಾಚಾರದ ಬಗ್ಗೆ ಸಿದ್ದರಾಮಯ್ಯ  ರಾಜ್ಯಕ್ಕೆ ಕ್ಷಮೆಕೋರಬೇಕು: ಆರ್‌.ಅಶೋಕ
WhatsApp Group Join Now
Telegram Group Join Now

ಬೆಂಗಳೂರು: ಮದ್ದೂರಿನ ಕೋಮು ಹಿಂಸಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.

ಕಳೆದ ರಾತ್ರಿ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಮದ್ದೂರು ಪಟ್ಟಣದಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಬೇಕೆಂದು ಎಂದರು.

ಕಾಂಗ್ರೆಸ್ ಸರ್ಕಾರದ ತುಷ್ಠೀಕರಣ ರಾಜಕೀಯದಿಂದ ದುಷ್ಕರ್ಮಿಗಳಿಗೆ ಗಲಾಟೆ ಮಾಡಲು ಧೈರ್ಯ ಬರುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸುವ ಒಂದು ವಿಶಿಷ್ಟ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳ ದೇವಾಲಯ, ನಂತರ ಮೈಸೂರು ಚಾಮುಂಡೇಶ್ವರಿ ದೇವಿ ಈಗ ಮದ್ದೂರು ಘಟನೆ ಮೂಲಕ ದೇವರಿಗೆ ಅವಮಾನ ಮಾಡಿದ್ದಾರೆ, ಇದಕ್ಕೆ ಕ್ಷಮೆಯಾಚಿಸಬೇಕು ಎಂದರು.

WhatsApp Group Join Now
Telegram Group Join Now
Share This Article