ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ

Ravi Talawar
ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲೆಯಲ್ಲಿ ಸಪ್ತ ನದಿಗಳ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ‌ ನೀಡಿ, ಸಂತ್ರಸ್ತರಿಗೆ ಧೈರ್ಯ ತುಂಬಲಿದ್ದಾರೆ. ವಿಶೇಷ ವಿಮಾನದಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮುಖ್ಯಮಂತ್ರಿ, 12.15ರ ಸುಮಾರಿಗೆ ಘಟಪ್ರಭಾ ನದಿ ಪ್ರವಾಹಕ್ಕೆ ಸಿಲುಕಿ ನಲುಗಿರುವ ಗೋಕಾಕ್ ಮತ್ತು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಅವಲೋಕಿಸಲಿದ್ದಾರೆ.

ಇದಾದ ಬಳಿಕ, ಮಧ್ಯಾಹ್ನದ ಕೃಷ್ಣಾ ನದಿ ಪ್ರವಾಹಕ್ಕೆ ಒಳಗಾದ ಕಾಗವಾಡ ತಾಲೂಕಿನ ಜೂಗಳ‌ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆ ವೀಕ್ಷಣೆ ಮಾಡಲಿದ್ದಾರೆ. ರಾತ್ರಿ 8 ಗಂಟೆ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ವೇಳೆ ಮುಖ್ಯಮಂತ್ರಿಗೆ ಜಿಲ್ಲೆಯ ಸಚಿವರು, ಶಾಸಕರು, ಅಧಿಕಾರಿಗಳು ಸಾಥ್ ಕೊಡಲಿದ್ದಾರೆ.

WhatsApp Group Join Now
Telegram Group Join Now
Share This Article